ಕುಮಟಾ : ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿ, ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರು – VIshwanews24

Featured, ರಾಜ್ಯ ನ್ಯೂಸ್

ಕುಮಟಾ : ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿ, ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರು – VIshwanews24

ಉತ್ತರ ಕನ್ನಡ: ಜಿಲ್ಲೆಯಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವಂತ ಭಾರೀ ಮಳೆ ದೊಡ್ಡ ಅವಾಂತರವನ್ನೇ ಸೃಷ್ಠಿಸಿದೆ. ನಿನ್ನೆಯ ತಡರಾತ್ರಿ ಗುಡುಗು ಸಹಿತ ಸುರಿದಂತ ಮಳೆಯ ಸಂದರ್ಭದಲ್ಲಿ ಮನೆಯೊಂದಕ್ಕೆ ಸಿಡಿಲು ಬಡಿದು  ಸಂಪೂರ್ಣವಾಗಿ ಹಾನಿಗೊಂಡಿದೆ.

ಆದ್ರೇ ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಯಲವಳ್ಳಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಾಗರಾಜ ಮಡಿವಾಳ ಎಂಬುವರ ಮನೆಗೆ ಸಿಡಿಲು ಬಡಿದಿದೆ. ಇದರಿಂದಾಗಿ ಮನೆಯ ಹಂಚುಗಳು ಸಂಪೂರ್ಣ ಹಾನಿಗೊಂಡಿವೆ. ಮನೆಯಲ್ಲಿದ್ದಂತ ಟಿವಿ, ಫ್ರಿಡ್ಜ್ ಸೇರಿದಂತೆ ಅನೇಕ ವಸ್ತುಗಳು ಸಂಪೂರ್ಣವಾಗಿ ಸಿಡಿಲು ಬಡಿತದಿಂದ ಹಾನಿಗೊಂಡಿವೆ.

ಜೋರು ಮಳೆಯ ಜೊತೆಗೆ ಸಿಡಿಲು ಬಡಿಯುವಂತ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ. ಬೇರೊಂದು ಕಡೆಯಲ್ಲಿ ಇದ್ದಿದ್ದರಿಂದಾಗಿ ಮನೆಗೆ ಸಿಡಿಲು ಬಡಿದು ನಾಶಗೊಂಡರೂ, ಯಾವುದೇ ಪ್ರಾಣಾಪಾಯ ಉಂಟಾಗಿದೆ.

ಸುಳ್ಯ: ಆಕಸ್ಮಿಕವಾಗಿ ಕೆರೆಗೆ ಬಿದ್ದು ಪಿಯುಸಿ ವಿದ್ಯಾರ್ಥಿನಿ ಸಾವು – Vishwanews24