ಕೊಪ್ಪಳ: ಕುಮಾರಸ್ವಾಮಿಯನ್ನು ಬಂಧಿಸುವ ಸನ್ನಿವೇಶ ಬಂದಿಲ್ಲ. ಅಂಥ ಸನ್ನಿವೇಶ ಬಂದರೆ ಮುಲಾಜಿಲ್ಲದೆ ಅರೆಸ್ಟ್ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಕೊಪ್ಪಳದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡುತ್ತಾರೋ ಎಂದು ಕುಮಾರಸ್ವಾಮಿ ಅವರು ಭಯ ಪಟ್ಟಿದ್ದಾರೆ. ಈಗಾಗಲೇ ಅವರನ್ನು ಲೋಕಾಯುಕ್ತ ಹಾಗೂ ಎಸಿಬಿ ಸಂಸ್ಥೆಗಳು ತನಿಖೆ ಮಾಡಿವೆ. ಕುಮಾರಸ್ವಾಮಿ ವಿರುದ್ಧ ಸಾಕಷ್ಟು ದಾಖಲೆ ಸಿಕ್ಕಿವೆ. ಈ ಹಿನ್ನೆಲೆ ಲೋಕಾಯುಕ್ತ ಸಂಸ್ಥೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ರಾಜ್ಯಪಾಲರನ್ನು ಕೇಳಿದ್ದಾರೆ. ಕುಮಾರಸ್ವಾಮಿಗೆ ಭಯ ಬಂದಿದೆ. ಅದಕ್ಕೆ ಹೀಗೆಲ್ಲ ಮಾತನಾಡುತ್ತಿದ್ದಾರೆ ಎಂದು ಹೇಳಿದರು.
ನನ್ನ ಕೇಸ್ ನಲ್ಲಿ ಯಾವುದೇ ತನಿಖೆ ಆಗಿಲ್ಲ. ಕೇವಲ ಟಿ.ಜೆ.ಅಬ್ರಹಾಂ ಬರೆದ ಪತ್ರದ ಆಧಾರದ ಮೇಲೆ ರಾಜ್ಯಪಾಲರು ನನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ಒಪ್ಪಿಗೆ ನೀಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್,ಸಚಿವ ಎಂ.ಬಿ ಪಾಟೀಲ್,ಮಾಜಿ ಸಂಸದ ಕರಡಿ ಸಂಗಣ್ಣ ಮುಂತಾದವರು ಉಪ್ಥಿತರಿದ್ದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…