ಬೆಂಗಳೂರು; “ಮಾಜಿ ಸಿಎಂ ಕುಮಾರಸ್ವಾಮಿಯವರಿಗೆ ಬಿಜೆಪಿ ಅಧಿಕಾರಕ್ಕೇರಿರುವುದು ಸಹಿಸಿಕೊಳ್ಳೋಕೆ ಆಗ್ತಾ ಇಲ್ಲ. ಇದೇ ಕಾರಣಕ್ಕೆ ಆ ಮನುಷ್ಯ ಅಧಿಕಾರ ಕಳೆದುಕೊಂಡಾಗಿನಿಂದ ಹೀಗೆ ಮಾತಾಡ್ತಾ ಇದಾರೆ. ” ಎಂದು ಹೇಳುವ ಮೂಲಕ ಕುಮಾರಸ್ವಾಮಿ ವಿರುದ್ಧ ಸಚಿವ ಶ್ರೀರಾಮುಲು ಕಿಡಿಕಾರಿದ್ದಾರೆ.
ಈ ಹಿಂದೆ ಹೇಳಿಕೆ ನೀಡಿದ್ದ ಕುಮಾರಸ್ವಾಮಿ “ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಸಂಪುಟದಲ್ಲಿ ಯಾವೊಬ್ಬ ಸಚಿವರೂ ಪ್ರಮಾಣಿಕವಾಗಿಲ್ಲ” ಎಂದು ಹೇಳುವ ಮೂಲಕ ಬಿಜೆಪಿ ನಾಯಕರನ್ನು ಕೆಣಕಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಖಾರವಾಗಿ ಪ್ರತಿಕ್ರಿಯೆ ನೀಡಿರುವ ಶ್ರೀರಾಮುಲು, “ಎರಡು ಬಾರಿ ಸಿಎಂ ಆದರೂ ಕುಮಾರಸ್ವಾಮಿಯವರಿಗೆ ಅವರ ಪಕ್ಷದ ಶಾಸಕರನ್ನು ಹಿಡಿದಿಟ್ಟುಕೊಳ್ಳೋಕೆ ಆಗ್ತಿಲ್ಲ.
ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗುವ ಮೊದಲು ಒಂದು ರೀತಿ ಮಾತನಾಡುತ್ತಾರೆ, ಸಿಎಂ ಆದ ಬಳಿಕ ಒಂದು ರೀತಿ ಮಾತನಾಡುತ್ತಾರೆ. ಇದಕ್ಕಾಗಿಯೇ ಅವರ ಪಕ್ಷದ ಶಾಸಕರು ಬಂಡಾಯವೆದ್ದು ಪಕ್ಷದಿಂದ ಹೊರ ನಡೆದಿದ್ದಾರೆ. ಅಧಿಕಾರ ಕಳೆದುಕೊಂಡು ಕುಮಾರಸ್ವಾಮಿ ಹತಾಶರಾಗಿದ್ದಾರೆ ಎಂದು ಕಿಡಿಕಾರಿದರು…. ಬಿಜೆಪಿ ಅಧಿಕಾರಕ್ಕೇರಿರುವುದು ಅವರಿಂದ ಸಹಿಸಿಕೊಳ್ಳೋಕೆ ಆಗ್ತಾ ಇಲ್ಲ. ಕಾಮಾಲೆ ಕಣ್ಣಿಗೆ ಜಗತ್ತೆಲ್ಲವೂ ಹಳದಿ” ಎಂದು ಹೇಳುವ ಮೂಲಕ ತೀಕ್ಷ್ಣವಾಗಿ ಕಿಡಿಕಾರಿದ್ದಾರೆ..
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…