ಬೆಂಗಳೂರು; “ಮಾಜಿ ಸಿಎಂ ಕುಮಾರಸ್ವಾಮಿಯವರಿಗೆ ಬಿಜೆಪಿ ಅಧಿಕಾರಕ್ಕೇರಿರುವುದು ಸಹಿಸಿಕೊಳ್ಳೋಕೆ ಆಗ್ತಾ ಇಲ್ಲ. ಇದೇ ಕಾರಣಕ್ಕೆ ಆ ಮನುಷ್ಯ ಅಧಿಕಾರ ಕಳೆದುಕೊಂಡಾಗಿನಿಂದ ಹೀಗೆ ಮಾತಾಡ್ತಾ ಇದಾರೆ. ” ಎಂದು ಹೇಳುವ ಮೂಲಕ ಕುಮಾರಸ್ವಾಮಿ ವಿರುದ್ಧ ಸಚಿವ ಶ್ರೀರಾಮುಲು ಕಿಡಿಕಾರಿದ್ದಾರೆ.
ಈ ಹಿಂದೆ ಹೇಳಿಕೆ ನೀಡಿದ್ದ ಕುಮಾರಸ್ವಾಮಿ “ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಸಂಪುಟದಲ್ಲಿ ಯಾವೊಬ್ಬ ಸಚಿವರೂ ಪ್ರಮಾಣಿಕವಾಗಿಲ್ಲ” ಎಂದು ಹೇಳುವ ಮೂಲಕ ಬಿಜೆಪಿ ನಾಯಕರನ್ನು ಕೆಣಕಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಖಾರವಾಗಿ ಪ್ರತಿಕ್ರಿಯೆ ನೀಡಿರುವ ಶ್ರೀರಾಮುಲು, “ಎರಡು ಬಾರಿ ಸಿಎಂ ಆದರೂ ಕುಮಾರಸ್ವಾಮಿಯವರಿಗೆ ಅವರ ಪಕ್ಷದ ಶಾಸಕರನ್ನು ಹಿಡಿದಿಟ್ಟುಕೊಳ್ಳೋಕೆ ಆಗ್ತಿಲ್ಲ.
ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗುವ ಮೊದಲು ಒಂದು ರೀತಿ ಮಾತನಾಡುತ್ತಾರೆ, ಸಿಎಂ ಆದ ಬಳಿಕ ಒಂದು ರೀತಿ ಮಾತನಾಡುತ್ತಾರೆ. ಇದಕ್ಕಾಗಿಯೇ ಅವರ ಪಕ್ಷದ ಶಾಸಕರು ಬಂಡಾಯವೆದ್ದು ಪಕ್ಷದಿಂದ ಹೊರ ನಡೆದಿದ್ದಾರೆ. ಅಧಿಕಾರ ಕಳೆದುಕೊಂಡು ಕುಮಾರಸ್ವಾಮಿ ಹತಾಶರಾಗಿದ್ದಾರೆ ಎಂದು ಕಿಡಿಕಾರಿದರು…. ಬಿಜೆಪಿ ಅಧಿಕಾರಕ್ಕೇರಿರುವುದು ಅವರಿಂದ ಸಹಿಸಿಕೊಳ್ಳೋಕೆ ಆಗ್ತಾ ಇಲ್ಲ. ಕಾಮಾಲೆ ಕಣ್ಣಿಗೆ ಜಗತ್ತೆಲ್ಲವೂ ಹಳದಿ” ಎಂದು ಹೇಳುವ ಮೂಲಕ ತೀಕ್ಷ್ಣವಾಗಿ ಕಿಡಿಕಾರಿದ್ದಾರೆ..
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…