ಮಂಡ್ಯ: ರಾಜ್ಯದಲ್ಲಿ ಡ್ರಗ್ ಕೇಸ್ ಯಾವ ರೀತಿ ಹಳ್ಳ ಹಿಡಿದಿದೆ ಎಂದು ನಾವೆಲ್ಲ ನೋಡಿದ್ದೇವೆ. ಅದೇ ರೀತಿ ಸಿಡಿ ಕೇಸ್ ಸಹ ಹಳ್ಳ ಹಿಡಿಯುತ್ತದೆ ಎಂದು ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ಗುಡುಗಿದ್ದಾರೆ.
ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಿವರಾಮೇಗೌಡ, ಡ್ರಗ್ ಕೇಸ್ನಲ್ಲಿ ಬಿಲ ಅಗೆದು ಹಿಡಿಯುವ ಹಾಗೆ ಬೇಕಾದವರನ್ನು ಬಿಟ್ಟು ಬೇಡವಾದವರನ್ನು ಹಿಡಿದರು. ಅದೇ ರೀತಿಯಲ್ಲಿ ಈ ಸಿಡಿ ಕೇಸ್ ಕೂಡ ಹಳ್ಳ ಹಿಡಿಯುತ್ತದೆ. ಪೊಲೀಸರು ಸರ್ಕಾರದ ಅನ್ನ ತಿನ್ನುತ್ತಿದ್ದೇವೆ ಎಂದು ಅಂದುಕೊಂಡಿದ್ದರೆ ಇಷ್ಟೊತ್ತಿಗೆ ರಮೇಶ್ ಜಾರಕಿಹೊಳಿಯನ್ನು ಬಂಧಿಸಬೇಕಿತ್ತು. ಆದರೆ ಇಲ್ಲಿಯವರಗೆ ಬಂಧಿಸುವ ಕೆಲಸ ಮಾತ್ರ ಆಗಿಲ್ಲ. ಮುಖ್ಯಮಂತ್ರಿಗಳು ಅತ್ಯಾಚಾರ ಆರೋಪಿಯನ್ನು ಉಪಚುನಾವಣೆಯ ಪ್ರಚಾರಕ್ಕೆ ಆಹ್ವಾನ ಮಾಡುತ್ತಾರೆ. ಇಂತಹ ಸಂದರ್ಭದಲ್ಲಿ ಈ ಕೇಸ್ಗೆ ನ್ಯಾಯವಾದರೂ ಹೇಗೆ ಸಿಗುತ್ತದೆ ಎಂದು ಸಿಎಂ ವಿರುದ್ಧ ಕಿಡಿಕಾರಿದರು.
ಸಿಎಂ ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕು : ರಾಜ್ಯಪಾಲರಿಗೆ ಸಿದ್ದರಾಮಯ್ಯ ಒತ್ತಾಯ -Vishwanews24
ಒಂದು ವೇಳೆ ಎಸ್ಐಟಿ ಅಧಿಕಾರಿಗಳು ಈ ಕೇಸ್ನ್ನು ಹಳ್ಳ ಹಿಡಿಸಿದರೆ, ನಾವು ಕೋರ್ಟ್ನಲ್ಲಿ ಈ ಬಗ್ಗೆ ದೂರು ದಾಖಲು ಮಾಡಿ ಸಿಬಿಐ ತನಿಖೆ ಆಗುವಂತೆ ಹೋರಾಟ ಮಾಡುತ್ತೇವೆ. ಮುಂದೆ ಕುಮಾರಸ್ವಾಮಿ ಅವರ ಸರ್ಕಾರ ಬಂದಾಗ ಈ ಕೇಸ್ನ್ನು ಸಿಬಿಐನಿಂದ ತನಿಖೆ ಮಾಡಿಸಿ ಸಂತ್ರಸ್ತೆಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ. ಅತ್ಯಾಚಾರಿ ಆರೋಪಿಯಾಗಿರುವ ರಮೇಶ್ ಜಾರಕಿಹೊಳಿ ತಲೆ ತಗ್ಗಿಸಿ ಇರಬೇಕಾಗಿತ್ತು. ಆದರೆ ಅವರು ಸರ್ಕಾರವನ್ನು ಬೀಳಿಸುತ್ತೇನೆ ಎಂದು ಬೆದರಿಸುತ್ತಿದ್ದಾರೆ. ಹೀಗೆ ಇರುವಾಗ ಈ ಕೇಸ್ನಲ್ಲಿ ಜಾರಕಿಹೊಳಿಗೆ ಕ್ಲೀನ್ ಚೀಟ್ ಸಿಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಅಭಿಪ್ರಯಾಪಟ್ಟರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…