ಬೀದರ್, (Vishwanews24): ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಕರಿಯ ಎಂದು ಸಂಬೋಧಿಸಿದ ಕಾರಣ ಜೆಡಿಎಸ್ ನಾಯಕರ ಹಾಗೂ ಕಾರ್ಯಕರ್ತರ ಟೀಕೆ ಒಳಗಾಗಿದ್ದ ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಇಂದು ಮತ್ತೆ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಮೀರ್, “ಕುಮಾರಸ್ವಾಮಿ ಅವರು ಇರೋದೇ ಕಪ್ಪು, ಹಾಗಾಗಿ ಬೆಳ್ಳಗೆ ಇರುವವರನ್ನು ಕರಿಯ ಎಂದು ಕರೆಯಲು ಆಗುತ್ತಾ?. ಅವರು ಕಪ್ಪು ಇರುವ ಕಾರಣ ಅವರನ್ನು ಕರಿಯ ಎಂದು ಕರೆದೆ. ನಾನು ಅವರನ್ನು ಕರಿಯ ಎಂದು ಕರೆದಿದ್ದು ತಪ್ಪು ಎಂದಾದರೆ ಅವರು ನನ್ನ ಮೇಲೆ ದೂರು ನೀಡಲಿ” ಎಂದಿದ್ದಾರೆ.
ಮಂಗಳೂರು : ಕರಾವಳಿಯಲ್ಲಿ ಪ್ರಯಾಣಿಕರಿಗೆ ತಟ್ಟದ ಮುಷ್ಕರ ಬಿಸಿ , 20ಕ್ಕೂ ಅಧಿಕ KSRTC ಬಸ್ ಓಡಾಟ -Vishwanews24
“ಜೆಡಿಎಸ್ ಕಾರ್ಯಕರ್ತರು ನನ್ನ ನಿವಾಸದ ಮುಂದೆ ಎರಡು ಬಾರಿ ಪ್ರತಿಭಟನೆ ನಡೆಸಿದ್ದಾರೆ. ಅವರು ನನ್ನನ್ನು ಕುಳ್ಳ ಎಂದು ಕರೆಯುತ್ತಾರೆ, ದೇವರು ನನಗೆ ಹೈಟ್ ನೀಡಿಲ್ಲ. ಹಾಗಾಗಿ ಅವರು ನನ್ನನ್ನು ಕುಳ್ಳ ಎಂದು ಕರೆದರೆ ನನಗೆ ಬೇಸರವಿಲ್ಲ” ಎಂದು ಹೇಳಿದ್ದಾರೆ.
“ಹೆಚ್ಡಿಕೆ ಅವರು ವಿದೇಶದವರ ರೀತಿ ಇದ್ದರೆ ನಾನು ನೀಡಿದ ಹೇಳಿಕೆ ತಪ್ಪಾಗುತ್ತಿತ್ತು. ಹುಟ್ಟಿದಾಗಲೇ ದೇವರು ಅವರನ್ನು ಕರ್ರಗೆ ಮಾಡಿ ಭೂಮಿಗೆ ಕಳುಹಿಸಿದ್ದಾರೆ. ಹಾಗಾಗಿ ಅವರು ಕಪ್ಪಗೆ ಇದ್ದಾರೆ. ಹಾಗಾಗಿ ನನ್ನ ಹೇಳಿಕೆ ಹೇಗೆ ತಪ್ಪಾಗಲು ಸಾಧ್ಯ?” ಎಂದು ಪ್ರಶ್ನಿಸಿದ್ದಾರೆ.
ಶಿವಮೊಗ್ಗ ಜೆಡಿಎಸ್ ಜಿಲ್ಲಾಧ್ಯಕ್ಷ ತಮ್ಮ ಬೆಂಬಲಿಗರ ಜೊತೆ ಕಾಂಗ್ರೆಸ್ ಪಕ್ಷ ಸೇರ್ಪಡೆ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…