ಮೈಸೂರು: “ಹೆಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರದಲ್ಲಿ ಉತ್ತಮವಾದ ಕೆಲಸ ಮಾಡಿದ್ದಾರೆ. ಅವರೊಬ್ಬ ರೈತನ ಮಗ” ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಪ್ರಶಂಸಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, “ಕುಮಾರಸ್ವಾಮಿ ಅವರು ರೈತರ ಸಾಲ ಮನ್ನಾದಂತಹ ರೈತರಪರವಾದ ಕಾರ್ಯಕ್ರಮವನ್ನು ನೀಡಿದ್ದಾರೆ. ಸರ್ಕಾರದಲ್ಲಿ ಅವರು ಉತ್ತಮ ಕೆಲಸ ಮಾಡಿದ್ದಾರೆ” ಎಂದು ಹೇಳಿದ್ದಾರೆ.
ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರು, ಗೋಹತ್ಯೆ ನಿಷೇಧ ಕಾಯ್ದೆ, ಪ್ರತಿಬಂಧಕ ಹಾಗೂ ಸಂರಕ್ಷಣಾ ವಿಧೇಯಕಕ್ಕೆ ಜೆಡಿಎಎಸ್ ಬೆಂಬಲದ ಬಗ್ಗೆ ಹಾಗೂ ಜೆಡಿಎಸ್ ನಿಲುವಿನ ವಿರುದ್ಧ ಹೆಚ್ಡಿಕೆ ವಿರುದ್ದ ವಾಗ್ದಾಳಿ ನಡೆಸಿದ್ದರು.
ಇದರ ಬೆನ್ನಲ್ಲೇ ಪ್ರತಾಪ್ ಸಿಂಹ ಹೆಚ್ಡಿಕೆ ಪರ ಬ್ಯಾಟಿಂಗ್ ಮಾಡಿದ್ದು, “ಹೆಚ್ಡಿಕೆ ಅವರಿಗೆ ರೈತರ ಹಾಗೂ ಗೋವಿನ ಬಗ್ಗೆ ತಿಳಿದಿದೆ. ಹಾಗಾಗಿ ಅವರು ಕಾಯ್ದೆಗೆ ಬೆಂಬಲ ನೀಡಿದ್ದಾರೆ. ಅವರು ಬಿಜೆಪಿ ಸರ್ಕಾರ ಮಾಡಿದ ಉತ್ತಮ ಕಾರ್ಯಕ್ಕೆ ಬೆಂಬಲ ನೀಡಿದ್ದಾರೆ. ರಾಜಕೀಯ ವಿಚಾರವಾಗಿ ಅವರನ್ನು ಟೀಕಿಸುವುದು ಸಣ್ಣತನ” ಎಂದಿದ್ದಾರೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…