Featured

ಕುಮಾರಸ್ವಾಮಿ ಅವರು ಸರ್ಕಾರದಲ್ಲಿ ಉತ್ತಮವಾದ ಕೆಲಸ ಮಾಡಿದ್ದಾರೆ. ಅವರೊಬ್ಬ ರೈತನ ಮಗ : ಪ್ರತಾಪ್‌ ಸಿಂಹ – Vishwanews24

ಕುಮಾರಸ್ವಾಮಿ ಅವರು ಸರ್ಕಾರದಲ್ಲಿ ಉತ್ತಮವಾದ ಕೆಲಸ ಮಾಡಿದ್ದಾರೆ. ಅವರೊಬ್ಬ ರೈತನ ಮಗ : ಪ್ರತಾಪ್‌ ಸಿಂಹ – Vishwanews24

ಮೈಸೂರು: “ಹೆಚ್‌‌.ಡಿ.ಕುಮಾರಸ್ವಾಮಿ ಅವರು ಸರ್ಕಾರದಲ್ಲಿ ಉತ್ತಮವಾದ ಕೆಲಸ ಮಾಡಿದ್ದಾರೆ. ಅವರೊಬ್ಬ ರೈತನ ಮಗ” ಎಂದು ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಪ್ರಶಂಸಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, “ಕುಮಾರಸ್ವಾಮಿ ಅವರು ರೈತರ ಸಾಲ ಮನ್ನಾದಂತಹ ರೈತರಪರವಾದ ಕಾರ್ಯಕ್ರಮವನ್ನು ನೀಡಿದ್ದಾರೆ. ಸರ್ಕಾರದಲ್ಲಿ ಅವರು ಉತ್ತಮ ಕೆಲಸ ಮಾಡಿದ್ದಾರೆ” ಎಂದು ಹೇಳಿದ್ದಾರೆ.

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರು, ಗೋಹತ್ಯೆ ನಿಷೇಧ ಕಾಯ್ದೆ, ಪ್ರತಿಬಂಧಕ ಹಾಗೂ ಸಂರಕ್ಷಣಾ ವಿಧೇಯಕಕ್ಕೆ ಜೆಡಿಎಎಸ್‌‌ ಬೆಂಬಲದ ಬಗ್ಗೆ ಹಾಗೂ ಜೆಡಿಎಸ್‌ ನಿಲುವಿನ ವಿರುದ್ಧ ಹೆಚ್‌ಡಿಕೆ ವಿರುದ್ದ ವಾಗ್ದಾಳಿ ನಡೆಸಿದ್ದರು.

ಇದರ ಬೆನ್ನಲ್ಲೇ ಪ್ರತಾಪ್‌ ಸಿಂಹ ಹೆಚ್‌ಡಿಕೆ ಪರ ಬ್ಯಾಟಿಂಗ್‌ ಮಾಡಿದ್ದು, “ಹೆಚ್‌ಡಿಕೆ ಅವರಿಗೆ ರೈತರ ಹಾಗೂ ಗೋವಿನ ಬಗ್ಗೆ ತಿಳಿದಿದೆ. ಹಾಗಾಗಿ ಅವರು ಕಾಯ್ದೆಗೆ ಬೆಂಬಲ ನೀಡಿದ್ದಾರೆ. ಅವರು ಬಿಜೆಪಿ ಸರ್ಕಾರ ಮಾಡಿದ ಉತ್ತಮ ಕಾರ್ಯಕ್ಕೆ ಬೆಂಬಲ ನೀಡಿದ್ದಾರೆ. ರಾಜಕೀಯ ವಿಚಾರವಾಗಿ ಅವರನ್ನು ಟೀಕಿಸುವುದು ಸಣ್ಣತನ” ಎಂದಿದ್ದಾರೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

3 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

3 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

3 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

3 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago