Featured

ಕುಮಾರಸ್ವಾಮಿ ಈಗಲೂ ನನ್ನ ಸ್ನೇಹಿತರು, ಮುಂದೆಯೂ ನನ್ನ ಸ್ನೇಹಿತರು; ನಾನು ಯಾರನ್ನೂ ದ್ವೇಷ ಮಾಡಲ್ಲ : ಡಿ.ಕೆ.ಶಿ -Vishwanews24

ಕುಮಾರಸ್ವಾಮಿ ಈಗಲೂ ನನ್ನ ಸ್ನೇಹಿತರು, ಮುಂದೆಯೂ ನನ್ನ ಸ್ನೇಹಿತರು; ನಾನು ಯಾರನ್ನೂ ದ್ವೇಷ ಮಾಡಲ್ಲ : ಡಿ.ಕೆ.ಶಿ -Vishwanews24

ಬೆಂಗಳೂರು: ಕುಮಾರಸ್ವಾಮಿ ಈಗಲೂ ನನ್ನ ಸ್ನೇಹಿತರು, ಮುಂದೆಯೂ ನನ್ನ ಸ್ನೇಹಿತರು. ನಾನು ಯಾರನ್ನೂ ದ್ವೇಷ ಮಾಡಲ್ಲ, ಅವರ ಹೇಳಿಕೆಯ ಕುರಿತು ಪ್ರತಿಕ್ರಿಯೆ ನೀಡುವುದಿಲ್ಲ. ನಾನು ಬಂಡೆನೂ ಅಲ್ಲ, ಮರಳು ಅಲ್ಲ, ಜಲ್ಲಿಯೂ ಅಲ್ಲ. ಉಪಯೋಗಿಸಿಕೊಂಡಿದ್ದಾರೆ ಬಿಡಿ ಎಂದು ಸದಾಶಿವನಗರ ನಿವಾಸದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಈ ಇಸ್ ಮೈ ಗುಡ್ ಫ್ರೆಂಡ್, ಟುಡೇ ಆಲ್ಸೋ… ಟುಮಾರೋ ಆಲ್ಸೋ…’ ಎಂದು ಕುಮಾರಸ್ವಾಮಿ ಕುರಿತು ಡಿಕೆಶಿ ಹೇಳಿದ್ದಾರೆ. ‘ಸಂಪದ್ಭರಿತ ಖಾತೆ ಕಾರಣಕ್ಕಾಗಿ ಸಮ್ಮಿಶ್ರ ಸರ್ಕಾರ ಇರಬೇಕು ಎಂದು ಡಿಕೆಶಿ ಬಯಸಿದ್ರು’ ಎಂದಿದ್ದ ಎಚ್​ಡಿಕೆ ಮಾತಿಗೆ ಸದಾಶಿವನಗರ ನಿವಾಸದಲ್ಲಿ ತಿರುಗೇಟು ನೀಡಿದ ಶಿವಕುಮಾರ್​, ‘ಅವರನ್ನೇಕೆ ಹಳೇ ದೋಸ್ತಿ ಅಂತೀರಾ? ನಾನು ದ್ವೇಷ ಮಾಡಲ್ಲ, ಎಲ್ಲ ಬಿಟ್ಟುಬಿಟ್ಟಿದ್ದೀನಿ. ಕುಮಾರಸ್ವಾಮಿ ಈಗಲೂ ನನ್ನ ಸ್ನೇಹಿತರು, ಮುಂದೆಯೂ ನನ್ನ ಸ್ನೇಹಿತರು’ ಎಂದರು.

ನಾನು ಬಂಡೆಯೂ ಅಲ್ಲ, ಮರಳೂ ಅಲ್ಲ, ಜಲ್ಲಿಯೂ ಅಲ್ಲ. ಆದರೂ ಉಪಯೋಗಿಸಿಕೊಂಡಿದ್ದಾರೆ ಎಂದ ಡಿಕೆಶಿ, ನನಗ್ಯಾಕೆ ನೋವಾಗಬೇಕು? ಜೆಡಿಎಸ್ ಬಗ್ಗೆ ನಾನೇಕೆ ಮಾತಾಡಲಿ? ಅವರದ್ದು ಒಂದು ಪಕ್ಷ, ಅವರನ್ನೇಕೆ ಡಿಗ್ರೇಡ್ ಮಾಡೋದು ಹೇಳಿ… ಸಿಎಂ ಮತ್ತು ಅವರ ಅಡ್ಜೆಸ್​ಮೆಂಟ್ ಏನೇನಿದೆಯೋ ಗೊತ್ತಿಲ್ಲ ಎಂದು ಮಾತಿನಲ್ಲೇ ತಿವಿದರು.

ಸರ್ಕಾರದ ಬಳಿ ಪಂಡಿತರಿದ್ದಾರೆ, ಬಹಳ ದೊಡ್ಡ ದೊಡ್ಡ ತಜ್ಞರಿದ್ದಾರೆ. ಸರ್ಕಾರ ನಮ್ಮ ಮಾತು, ಸಲಹೆಯನ್ನಂತೂ ಕೇಳುವುದಿಲ್ಲ. ಏನೇ ಗಲಾಟೆಯಾಗಲಿ ಕಾಂಗ್ರೆಸ್ ನವರೇ ಕಾರಣ ಎನ್ನುತ್ತಾರೆ. ಸರ್ಕಾರಕ್ಕೆ ಕೋವಿಡ್ ವಿಚಾರದಲ್ಲೂ ಹಿಡನ್ ಅಜೆಂಡಾ ಇದೆ. ನಾನು ತಜ್ಞರ ಜೊತೆ ಚರ್ಚೆ ಮಾಡಿ ಮುಂದೆ ಮಾತನಾಡುತ್ತೇನೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

 

Vishwa News 24

Recent Posts

ಉಡುಪಿ: ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ – vishwanews24

ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್…

8 hours ago

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ – vishwanews24

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು…

8 hours ago

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು – vishwanews24

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…

9 hours ago

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ : ಕಾಂಗ್ರೆಸ್ ಟ್ವೀಟ್ – vishwanews24

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…

11 hours ago

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ – vishwanews24

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್‌ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಂದು ಬ್ರೇಕ್‌ಫಾಸ್ಟ್‌…

11 hours ago

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

11 hours ago