ಪ್ರಧಾನಿ ನರೇಂದ್ರ ಮೋದಿ ಅವರು ಸಮ್ಮಿಶ್ರ ಸರ್ಕಾರಕ್ಕೆ ಸಹಕಾರ ನೀಡಬೇಕು. ಇಲ್ಲದಿದ್ದರೇ ಒಕ್ಕಲಿಗ ಸಮುದಾಯ ಪ್ರಧಾನಿಗಳ ವಿರುದ್ಧ ನಿಲ್ಲುತ್ತದೆ ಎಂದು ಶ್ರೀ ಗುರುಗುಂಡಾ ಬ್ರಹ್ಮೇಶ್ವರ ಸ್ವಾಮಿ ಮಹಾ ಸಂಸ್ಥಾನದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಹೇಳಿದ್ದಾರೆ.
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವಾಮೀಜಿ, ಮುಖ್ಯಮಂತ್ರಿ ಸ್ಥಾನದಿಂದ ಎಚ್.ಡಿ.ಕುಮಾರಸ್ವಾಮಿ ಅವರನ್ನು ಇಳಿಸುವುದಕ್ಕೆ ಪ್ರಯತ್ನ ಸಲ್ಲದು. ಸಿಎಂ ಕುಮಾರಸ್ವಾಮಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಹಕಾರ ನೀಡಬೇಕು ಎಂದು ಸ್ವಾಮೀಜಿ ಹೇಳಿದರು.
5 ವರ್ಷ ಕುಮಾರಸ್ವಾಮಿ ಸಿಎಂ ಆಗಿರಬೇಕು ಎಂಬುದು ನಮ್ಮೆಲ್ಲರ ಆಸೆ, ಆ ಆಸೆಯನ್ನು ಈಡೇರಿಸುವ ಜವಬ್ದಾರಿಯನ್ನು ಡಿಕೆಶಿ ಹೆರಬೇಕು ಎಂದು ಹೇಳಿದರು.
ಮಾಜಿ ಸಿಎಂ ಸದಾನಂದ ಗೌಡ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಿದ್ದಕ್ಕೆ ನಂತರದ ಚುನಾವಣೆಯಲ್ಲಿ ಬಿಜೆಪಿ ಸೋಲಬೇಕಾಯಿತು. ಅತಂತ್ರ ಪರಿಸ್ಥಿತಿ ನಿರ್ಮಾಣವಾದರೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯಾಗಿ ಸರ್ಕಾರ ರಚಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಅವರು ಭರವಸೆ ನೀಡಿದ್ದರು. ಕೊಟ್ಟ ಭರವಸೆಯಂತೆ ಡಿ.ಕೆ.ಶಿವಕುಮಾರ್ ಅವರು ನಡೆದುಕೊಂಡಿದ್ದಾರೆ ಎಂದು ಶ್ರೀಗಳು ಹೇಳಿದರು.
ನಂಜಾವಧೂತ ಸ್ವಾಮೀಜಿ ಅಷ್ಟೇ ಅಲ್ಲದೇ ಕಾರ್ಯಕ್ರಮದಲ್ಲಿ ಹಾಜರಿದ್ದ ಚಂದ್ರಶೇಖರ ಸ್ವಾಮೀಜಿ ಕೂಡ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರ ಪರ ಬ್ಯಾಟ್ ಬೀಸಿದರು.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…