ಪ್ರಧಾನಿ ನರೇಂದ್ರ ಮೋದಿ ಅವರು ಸಮ್ಮಿಶ್ರ ಸರ್ಕಾರಕ್ಕೆ ಸಹಕಾರ ನೀಡಬೇಕು. ಇಲ್ಲದಿದ್ದರೇ ಒಕ್ಕಲಿಗ ಸಮುದಾಯ ಪ್ರಧಾನಿಗಳ ವಿರುದ್ಧ ನಿಲ್ಲುತ್ತದೆ ಎಂದು ಶ್ರೀ ಗುರುಗುಂಡಾ ಬ್ರಹ್ಮೇಶ್ವರ ಸ್ವಾಮಿ ಮಹಾ ಸಂಸ್ಥಾನದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಹೇಳಿದ್ದಾರೆ.
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವಾಮೀಜಿ, ಮುಖ್ಯಮಂತ್ರಿ ಸ್ಥಾನದಿಂದ ಎಚ್.ಡಿ.ಕುಮಾರಸ್ವಾಮಿ ಅವರನ್ನು ಇಳಿಸುವುದಕ್ಕೆ ಪ್ರಯತ್ನ ಸಲ್ಲದು. ಸಿಎಂ ಕುಮಾರಸ್ವಾಮಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಹಕಾರ ನೀಡಬೇಕು ಎಂದು ಸ್ವಾಮೀಜಿ ಹೇಳಿದರು.
5 ವರ್ಷ ಕುಮಾರಸ್ವಾಮಿ ಸಿಎಂ ಆಗಿರಬೇಕು ಎಂಬುದು ನಮ್ಮೆಲ್ಲರ ಆಸೆ, ಆ ಆಸೆಯನ್ನು ಈಡೇರಿಸುವ ಜವಬ್ದಾರಿಯನ್ನು ಡಿಕೆಶಿ ಹೆರಬೇಕು ಎಂದು ಹೇಳಿದರು.
ಮಾಜಿ ಸಿಎಂ ಸದಾನಂದ ಗೌಡ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಿದ್ದಕ್ಕೆ ನಂತರದ ಚುನಾವಣೆಯಲ್ಲಿ ಬಿಜೆಪಿ ಸೋಲಬೇಕಾಯಿತು. ಅತಂತ್ರ ಪರಿಸ್ಥಿತಿ ನಿರ್ಮಾಣವಾದರೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯಾಗಿ ಸರ್ಕಾರ ರಚಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಅವರು ಭರವಸೆ ನೀಡಿದ್ದರು. ಕೊಟ್ಟ ಭರವಸೆಯಂತೆ ಡಿ.ಕೆ.ಶಿವಕುಮಾರ್ ಅವರು ನಡೆದುಕೊಂಡಿದ್ದಾರೆ ಎಂದು ಶ್ರೀಗಳು ಹೇಳಿದರು.
ನಂಜಾವಧೂತ ಸ್ವಾಮೀಜಿ ಅಷ್ಟೇ ಅಲ್ಲದೇ ಕಾರ್ಯಕ್ರಮದಲ್ಲಿ ಹಾಜರಿದ್ದ ಚಂದ್ರಶೇಖರ ಸ್ವಾಮೀಜಿ ಕೂಡ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರ ಪರ ಬ್ಯಾಟ್ ಬೀಸಿದರು.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…