Featured

ಕುಮಾರಸ್ವಾಮಿ ಹೇಗಿದ್ದರೂ ಎಂಪಿಯಾಗುವುದಿಲ್ಲ ; ಹೆದರಿ ಪಕ್ಕದ ಜಿಲ್ಲೆಗೆ ಹೋಗಿದ್ದೀಯ : ಏಕವಚನದಲ್ಲೇ ವಾಗ್ದಾಳಿ ನಡೆಸಿದ ಡಿಕೆ ಶಿ – Vishwanews24

ಕುಮಾರಸ್ವಾಮಿ ಹೇಗಿದ್ದರೂ ಎಂಪಿಯಾಗುವುದಿಲ್ಲ ; ಹೆದರಿ ಪಕ್ಕದ ಜಿಲ್ಲೆಗೆ ಹೋಗಿದ್ದೀಯ : ಏಕವಚನದಲ್ಲೇ ವಾಗ್ದಾಳಿ ನಡೆಸಿದ ಡಿಕೆ ಶಿ

ಬೆಳಗಾವಿ: ಗ್ಯಾರಂಟಿ ಯೋಜನೆಯಿಂದ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದರೆ ಏನರ್ಥ ಎಂದು ಪ್ರಶ್ನಿಸಿದ ಡಿಸಿಎಂ ಡಿಕೆ ಶಿವಕುಮಾರ್  ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದರು.

ಬೆಳಗಾವಿಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಕುಮಾರಸ್ವಾಮಿ ಹೇಗಿದ್ದರೂ ಎಂಪಿಯಾಗುವುದಿಲ್ಲ. ಮಿಸ್ಟರ್​ ಕುಮಾರಸ್ವಾಮಿ ಹೆದರಿ ಪಕ್ಕದ ಜಿಲ್ಲೆಗೆ ಹೋಗಿದ್ದೀಯ​. ಚರ್ಚೆ ಮಾಡಲು ಸದನಕ್ಕೆ ಬಾ. ನೀನು ಎಂತ ಸುಳ್ಳುಗಾರ ಎಂಬುದು ಗೊತ್ತಾಗಲಿದೆ’ ಎಂದರು.

ನಾನು ಕಲ್ಲು ಲೂಟಿ ಮಾಡಿದೆನೋ, ಮೋಸ ಮಾಡಿದೆನೋ ಎಂಬ ಬಗ್ಗೆ ಕುಮಾರಸ್ವಾಮಿ ಬಹಿರಂಗ ಚರ್ಚೆಗೆ ಬರಲಿ ಎಂದು ಡಿಕೆ ಶಿವಕುಮಾರ್ ಸವಾಲು ಹಾಕಿದರು.

ಹೆಣ್ಣುಮಕ್ಕಳು ದಾರಿ ತಪ್ಪಿದ್ದಾರೆ ಎಂದು ಹೆಚ್​ಡಿಕೆ ಹೇಳಿದ್ದಾರೆ. ಇದನ್ನು ನಾವು ಖಂಡಿಸಬೇಕು. ನಾನು ಎಲ್ಲ ಮಹಿಳಾ ಸಂಘಟನೆಗಳಿಗೆ ಕರೆ ಕೊಡ್ತೇನೆ, ನಿಮ್ಮ ಸ್ವಾಭಿಮಾನ ಉಳಿಸಿಕೊಳ್ಳಲು ಪ್ರತಿಭಟನೆ ಮಾಡಿ. ಪ್ರತಿಯೊಂದು ತಾಲೂಕಿನಲ್ಲಿ ಹೋರಾಟ ಮಾಡಬೇಕು. ಒಂದು ಪಕ್ಷದ ಅಧ್ಯಕ್ಷನಾಗಿ ನಾನು ಈ ಕರೆ ಕೊಡ್ತಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ಕುಮಾರಸ್ವಾಮಿಗೆ ಪಿಕ್​ ಪಾಕೆಟ್​ ಮಾಡಿ ರೂಢಿ ಇದೆ. ಅದಕ್ಕೆ ಗ್ಯಾರಂಟಿಗಳನ್ನು ಪಿಕ್​​ ಪಾಕೆಟ್​ ಎಂದು ಹೇಳಿದ್ದಾರೆ. ಕುಮಾರಸ್ವಾಮಿಯ ವಿಷಾದ ನಮಗೆ ಬೇಡ. ಕೊಲೆ ಮಾಡಿ ನಂತರ ವಿಷಾದ ಎಂದು ಹೇಳಿದರೆ ಹೇಗೆ? ಹಿಟ್​ ಆ್ಯಂಡ್​ ರನ್​ಗೆ ಕುಮಾರಸ್ವಾಮಿ ಬಹಳ ಫೇಮಸ್​ ಎಂದು ಡಿಕೆ ಶಿವಕುಮಾರ್ ಟೀಕಿಸಿದರು. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸ್ತೇನೆ ಎಂದು ಕುಮಾರಸ್ವಾಮಿ ಹೇಳಿದ ಬೆನ್ನಲ್ಲೇ ಡಿಕೆ ಶಿವಕುಮಾರ್ ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ.

 

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

12 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago