ಮೈಸೂರು: ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ 5 ವರ್ಷ ಮುಖ್ಯಮಂತ್ರಿ ಆಗಿರಲು ಜೆಡಿಎಸ್ ಶಾಸಕರು ಎಂಥಾ ತ್ಯಾಗಕ್ಕು ಸಿದ್ದ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ರಾಜ್ಯದ ಹಿತದೃಷ್ಟಿಯಿಂದ ಕುಮಾರಸ್ವಾಮಿ 5 ವರ್ಷ ಸಿಎಂ ಆಗಿರಬೇಕು. ಇದಕ್ಕೆ ನಾನು ಸೇರಿದಂತೆ ಜೆಡಿಎಸ್ ಎಲ್ಲ ಶಾಸಕರು ತ್ಯಾಗಕ್ಕೆ ಸಿದ್ದರಾಗಿದ್ದೇವೆ, ಮಂತ್ರಿಮಂಡಲ ವಿಸ್ತರಣೆ ಅಥವಾ ಪುನರ್ರಚನೆ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ, ಯಾರು ಮಂತ್ರಿ ಆಗಬೇಕು, ಯಾರು ಅಧಿಕಾರಲ್ಲಿ ಇರಬೇಕು ಅಂತ ಯೋಚನೆ ಇಲ್ಲ. ರೈತರು ಉಳಿಯಬೇಕು. ಹೀಗಾಗಿ ಕುಮಾರಸ್ವಾಮಿ ಯಾವುದೇ ನಿರ್ಧಾರ ತೆಗೆದುಕೊಂಡರು ನಾವು ಸಿದ್ದ ಎಂದರು.
ತಮಿಳುನಾಡಿನ 9.19 ಟಿಎಂಸಿ ಕಾವೇರಿ ನೀರು ಬಿಡುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಕಾನೂನಾತ್ಮಕ ತೊಡಕುಗಳನ್ನ ಬಗೆಹರಿಸುತ್ತಾರೆ. ನಾನು ಈ ರಾಜ್ಯದ ಪ್ರಜೆಯಾಗಿ ನೀರು ಬಿಡುಲು ಸಾಧ್ಯವಿಲ್ಲ ಎನ್ನುತ್ತೇನೆ. ನಮ್ಮಲ್ಲೆ ಬರ ಇದೆ ಧರ್ಮಸ್ಥಳದಲ್ಲೇ ನೀರಿಲ್ಲ. ಹೀಗಿರುವಾಗ ನೀರು ಕೂಡುವುದು ಬೇಡ ಎಂದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…