Featured

ಕುಮ್ಕಿ ಭೂಮಿ ಮಂಜೂರು ಮಾಡಲು ಸಾಧ್ಯವಿಲ್ಲ , ಬಡವರ ಮನೆ ತೆರವೂ ಇಲ್ಲ :  ಸಚಿವ ಕೃಷ್ಣ ಭೈರೇಗೌಡ ಸ್ಪಷ್ಟನೆ – vishwanews24

ಕುಮ್ಕಿ ಭೂಮಿ ಮಂಜೂರು ಮಾಡಲು ಸಾಧ್ಯವಿಲ್ಲ , ಬಡವರ ಮನೆ ತೆರವೂ ಇಲ್ಲ :  ಸಚಿವ ಕೃಷ್ಣ ಭೈರೇಗೌಡ ಸ್ಪಷ್ಟನೆ

ಬೆಂಗಳೂರು : ಕಾನೂನು ರೀತಿಯಲ್ಲಿ ‘ಕುಮ್ಕಿ ಭೂಮಿ’ ಮಂಜೂರು ಮಾಡಲು ಸಾಧ್ಯವಿಲ್ಲ. ಆದರೆ, ಕುಮ್ಕಿ ಜಮೀನಿನಲ್ಲಿ ಬಡವರು ನಿರ್ಮಿಸಿಕೊಂಡಿರುವ ಮನೆಗಳ ತೆರವು ಕಾರ್ಯಾಚರಣೆಯನ್ನೂ ಮಾಡುವುದಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಸ್ಪಷ್ಟಪಡಿಸಿದ್ದಾರೆ.

ಸೋಮವಾರ ವಿಧಾನಸಭಾ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ವಿ.ಸುನೀಲ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಾನೂನಿನ ಪ್ರಕಾರ ಕುಮ್ಕಿ ಜಮೀನನ್ನು ಯಾರಿಗೂ ಮಂಜೂರು ಮಾಡುವುದು ಸಾಧ್ಯವಿಲ್ಲ. ಆಗುತ್ತೆ, ನೋಡೋಣ ಎಂದು ಜನರಿಗೆ ತಪ್ಪು ಮಾಹಿತಿ ಅಥವಾ ತಪ್ಪು ನಿರೀಕ್ಷೆಗಳನ್ನು ನೀಡಲು ನಾವು ಸಿದ್ದರಿಲ್ಲ. ಕಹಿಯಾದರೂ ಸತ್ಯವನ್ನು ಹೇಳಲೇಬೇಕು. ಕುಮ್ಕಿ ಜಮೀನನ್ನು ಮಂಜೂರು ಮಾಡಲು ಸಾಧ್ಯವಿಲ್ಲ ಎಂದರು.

ಕುಮ್ಕಿ ಜನೀನನ್ನು ಮಂಜೂರು ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಈ ಹಿಂದೆ ಬಿಜೆಪಿ ಸರಕಾರ ಇದ್ದಾಗ ಸಂಪುಟ ಉಪ ಸಮಿತಿ ಸಭೆ ರಚನೆ ಮಾಡಿತ್ತು. ಈ ಸಭೆ ದೀರ್ಘ ಚರ್ಚೆ ನಡೆಸಿದ ನಂತರ ಕುಮ್ಕಿ ಜಮೀನನ್ನು ಮಂಜೂರು ಮಾಡುವುದು ಸಾಧ್ಯವಿಲ್ಲ ಎಂದು ಈ ವಿಚಾರವನ್ನೇ ಕೈಬಿಟ್ಟಿತ್ತು ಎಂಬ ಮಾಹಿತಿಯನ್ನು ಅವರು ಸದನಕ್ಕೆ ನೀಡಿದರು.

ಅಲ್ಲದೆ, ಕೆಎಲ್‍ಆರ್ ಆಕ್ಟ್ ರೂಲ್ಸ್- 79ರ ಪ್ರಕಾರ ಕುಮ್ಕಿ ಪ್ರದೇಶವನ್ನು ಉಪಯೋಗ ಮಾಡಿಕೊಳ್ಳುವ ಹಕ್ಕನ್ನು ಜನರಿಗೆ ನೀಡಲಾಗಿದೆ. ಜಮೀನಿಗೆ ಹೊಂದಿಕೊಂಡಿರುವ ಕಾಡಿನ ಭಾಗದ ಉಪ ಉತ್ಪನ್ನಗಳನ್ನು ಬಳಕೆ ಮಾಡಿಕೊಳ್ಳುವ ಹಕ್ಕನ್ನು ನೀಡಲಾಗಿದೆ. ಆದರೆ, ಆ ಜಾಗಗಳನ್ನು ಮಂಜೂರು ಮಾಡಲಾಗುವುದಿಲ್ಲ ಎಂಬ ಅಂಶ ಕಾನೂನಿನಲ್ಲಿ ಸ್ಪಷ್ಟವಾಗಿದೆ. ಹೀಗಾಗಿ ಕುಮ್ಕಿ ಜಮೀನನ್ನು ಕನಿಷ್ಠ ಭೋಗ್ಯಕ್ಕೆ ನೀಡುವುದಾದರೂ ಸಾಧ್ಯವಿದೆಯಾ ಎಂಬ ಕುರಿತು ಗಂಭೀರವಾಗಿ ಪರಿಶೀಲಿಸಲಾಗುವುದು ಎಂದು ಸ್ಪಷ್ಟೀಕರಣ ನೀಡಿದರು.

ಇದಕ್ಕೂ ಮುನ್ನ ಸುನೀಲ್ ಕುಮಾರ್ ಪ್ರಸ್ತಾಪಿಸಿ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಕುಮ್ಕಿ ಜಮೀನಿನ ಸಮಸ್ಯೆ ಉಲ್ಬಣಿಸಿದ್ದು, ಸ್ವಾಧೀನದಲ್ಲಿರುವ ಕುಮ್ಕಿ ಜಮೀನಿನನ್ನು ಕಲಂ ನಮೂನೆ 53-57 ಹಾಗು 93 ಸಿಸಿ ಪ್ರಕಾರ ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

2 hours ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

2 hours ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

2 hours ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

20 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

20 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

20 hours ago