Featured

ಕುಮ್ಕಿ ಭೂಮಿ ಮಂಜೂರು ಮಾಡಲು ಸಾಧ್ಯವಿಲ್ಲ , ಬಡವರ ಮನೆ ತೆರವೂ ಇಲ್ಲ :  ಸಚಿವ ಕೃಷ್ಣ ಭೈರೇಗೌಡ ಸ್ಪಷ್ಟನೆ – vishwanews24

ಕುಮ್ಕಿ ಭೂಮಿ ಮಂಜೂರು ಮಾಡಲು ಸಾಧ್ಯವಿಲ್ಲ , ಬಡವರ ಮನೆ ತೆರವೂ ಇಲ್ಲ :  ಸಚಿವ ಕೃಷ್ಣ ಭೈರೇಗೌಡ ಸ್ಪಷ್ಟನೆ

ಬೆಂಗಳೂರು : ಕಾನೂನು ರೀತಿಯಲ್ಲಿ ‘ಕುಮ್ಕಿ ಭೂಮಿ’ ಮಂಜೂರು ಮಾಡಲು ಸಾಧ್ಯವಿಲ್ಲ. ಆದರೆ, ಕುಮ್ಕಿ ಜಮೀನಿನಲ್ಲಿ ಬಡವರು ನಿರ್ಮಿಸಿಕೊಂಡಿರುವ ಮನೆಗಳ ತೆರವು ಕಾರ್ಯಾಚರಣೆಯನ್ನೂ ಮಾಡುವುದಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಸ್ಪಷ್ಟಪಡಿಸಿದ್ದಾರೆ.

ಸೋಮವಾರ ವಿಧಾನಸಭಾ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ವಿ.ಸುನೀಲ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಾನೂನಿನ ಪ್ರಕಾರ ಕುಮ್ಕಿ ಜಮೀನನ್ನು ಯಾರಿಗೂ ಮಂಜೂರು ಮಾಡುವುದು ಸಾಧ್ಯವಿಲ್ಲ. ಆಗುತ್ತೆ, ನೋಡೋಣ ಎಂದು ಜನರಿಗೆ ತಪ್ಪು ಮಾಹಿತಿ ಅಥವಾ ತಪ್ಪು ನಿರೀಕ್ಷೆಗಳನ್ನು ನೀಡಲು ನಾವು ಸಿದ್ದರಿಲ್ಲ. ಕಹಿಯಾದರೂ ಸತ್ಯವನ್ನು ಹೇಳಲೇಬೇಕು. ಕುಮ್ಕಿ ಜಮೀನನ್ನು ಮಂಜೂರು ಮಾಡಲು ಸಾಧ್ಯವಿಲ್ಲ ಎಂದರು.

ಕುಮ್ಕಿ ಜನೀನನ್ನು ಮಂಜೂರು ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಈ ಹಿಂದೆ ಬಿಜೆಪಿ ಸರಕಾರ ಇದ್ದಾಗ ಸಂಪುಟ ಉಪ ಸಮಿತಿ ಸಭೆ ರಚನೆ ಮಾಡಿತ್ತು. ಈ ಸಭೆ ದೀರ್ಘ ಚರ್ಚೆ ನಡೆಸಿದ ನಂತರ ಕುಮ್ಕಿ ಜಮೀನನ್ನು ಮಂಜೂರು ಮಾಡುವುದು ಸಾಧ್ಯವಿಲ್ಲ ಎಂದು ಈ ವಿಚಾರವನ್ನೇ ಕೈಬಿಟ್ಟಿತ್ತು ಎಂಬ ಮಾಹಿತಿಯನ್ನು ಅವರು ಸದನಕ್ಕೆ ನೀಡಿದರು.

ಅಲ್ಲದೆ, ಕೆಎಲ್‍ಆರ್ ಆಕ್ಟ್ ರೂಲ್ಸ್- 79ರ ಪ್ರಕಾರ ಕುಮ್ಕಿ ಪ್ರದೇಶವನ್ನು ಉಪಯೋಗ ಮಾಡಿಕೊಳ್ಳುವ ಹಕ್ಕನ್ನು ಜನರಿಗೆ ನೀಡಲಾಗಿದೆ. ಜಮೀನಿಗೆ ಹೊಂದಿಕೊಂಡಿರುವ ಕಾಡಿನ ಭಾಗದ ಉಪ ಉತ್ಪನ್ನಗಳನ್ನು ಬಳಕೆ ಮಾಡಿಕೊಳ್ಳುವ ಹಕ್ಕನ್ನು ನೀಡಲಾಗಿದೆ. ಆದರೆ, ಆ ಜಾಗಗಳನ್ನು ಮಂಜೂರು ಮಾಡಲಾಗುವುದಿಲ್ಲ ಎಂಬ ಅಂಶ ಕಾನೂನಿನಲ್ಲಿ ಸ್ಪಷ್ಟವಾಗಿದೆ. ಹೀಗಾಗಿ ಕುಮ್ಕಿ ಜಮೀನನ್ನು ಕನಿಷ್ಠ ಭೋಗ್ಯಕ್ಕೆ ನೀಡುವುದಾದರೂ ಸಾಧ್ಯವಿದೆಯಾ ಎಂಬ ಕುರಿತು ಗಂಭೀರವಾಗಿ ಪರಿಶೀಲಿಸಲಾಗುವುದು ಎಂದು ಸ್ಪಷ್ಟೀಕರಣ ನೀಡಿದರು.

ಇದಕ್ಕೂ ಮುನ್ನ ಸುನೀಲ್ ಕುಮಾರ್ ಪ್ರಸ್ತಾಪಿಸಿ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಕುಮ್ಕಿ ಜಮೀನಿನ ಸಮಸ್ಯೆ ಉಲ್ಬಣಿಸಿದ್ದು, ಸ್ವಾಧೀನದಲ್ಲಿರುವ ಕುಮ್ಕಿ ಜಮೀನಿನನ್ನು ಕಲಂ ನಮೂನೆ 53-57 ಹಾಗು 93 ಸಿಸಿ ಪ್ರಕಾರ ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು

Vishwa News 24

Recent Posts

ಕಾರ್ಕಳ: ಹೋಟೆಲ್‌ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್‌ – vishwanews24

ಕಾರ್ಕಳ: ಹೋಟೆಲ್‌ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್‌ ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ…

1 hour ago

ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ  ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್‌ – vishwanews24

ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ  ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್‌ ಬೆಂಗಳೂರು: ಸಚಿವ ಸ್ಥಾನ ಸಿಗದ…

2 hours ago

ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ – vishwanews24

ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ ಕಾಪು: ಯುವವಾಹಿನಿ (ರಿ.) ಕಾಪು ಘಟಕದ ನೇತೃತ್ವದಲ್ಲಿ ಶ್ರೀ ನಾರಾಯಣಗುರು…

2 hours ago

ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ – vishwanews24

ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ ಮಣಿಪಾಲ: ಜನನಿ ಬಾರ್ & ರೆಸ್ಟೋರೆಂಟ್ ಎದುರು…

3 hours ago

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ – vishwanews24

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ ಬೆಂಗಳೂರು: ಶಾಸಕರು…

5 hours ago

ರಾಜ್ಯದ ಅತಿವೃಷ್ಟಿ / ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ: ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ – vishwanews24

ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ : ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ ಬೆಂಗಳೂರು: ರಾಜ್ಯದಲ್ಲಿನ ಅತಿವೃಷ್ಟಿ /…

5 hours ago