ನವದೆಹಲಿ:
ಗೂಢಚಾರಿಕೆ ಆರೋಪದ ಮೇಲೆ ಪಾಕಿಸ್ತಾನದಲ್ಲಿ ಬಂಧಿತರಾಗಿರುವ ಭಾರತದ ನಿವೃತ್ತ ನೌಕಾ ಅಧಿಕಾರಿ ಕುಲಭೂಷಣ್ ಜಾಧವ್ ರನ್ನು ಭಾರತೀಯ ರಾಯಭಾರಿ ಗೌರವ್ ಅಹ್ಲುವಾಲಿಯಾ ನಿನ್ನೆ ಭೇಟಿ ಮಾಡಿದ್ದರು.
ಭೇಟಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಲಭೂಷಣ್ ಜಾದವ್ ಮೇಲೆ ಪಾಕಿಸ್ತಾನ ಸುಳ್ಳು ಆರೋಪಗಳನ್ನು ಹೊರಿಸಿ ಬಂಧಿಸಿದೆ. ಅಲ್ಲದೆ ಅವರು ಮಾಡದ ತಪ್ಪನ್ನು ಒಪ್ಪಿಕೊಳ್ಳುವಂತೆ ತೀವ್ರ ಒತ್ತಡ ಹೇರುತ್ತಿದೆ. ಈ ಹಿಂದೆ ಕುಲಭೂಷಣ್ ಜಾದವ್ ನೀಡಿದ್ದ ಹೇಳಿಕೆ ಕೂಡ ಪಾಕಿಸ್ತಾನದ ನಿರ್ದೇಶನದಂತೆ ಬಂದ ಹೇಳಿಕೆಯಾಗಿದೆ ಎಂದು ಹೇಳಿದ್ದಾರೆ.
ಇನ್ನು ಈ ಹಿಂದೆ ಅಂತಾರಾಷ್ಟ್ರೀಯ ನ್ಯಾಯಾಲಯದ ನಿರ್ದೇಶನದ ಮೇರೆಗೆ ಪಾಕಿಸ್ತಾನ ಜಾಧವ್ ಭೇಟಿಗೆ ಅವಕಾಶ ನೀಡಿತ್ತು. ಈ ವೇಳೆ ಪಾಕಿಸ್ತಾನ ಇಲ್ಲ ಸಲ್ಲದ ಆರೋಪಗಳನ್ನು ಗಿಳಿ ಪಾಠದಂತೆ ಒಪ್ಪಿಸಲು ಜಾಧವ್ ಮೇಲೆ ತೀವ್ರ ಒತ್ತಡವನ್ನು ಹೇರಿದೆ. ನಾವು ಸಮಗ್ರ ವರದಿಗಾಗಿ ಕಾಯುತ್ತಿದ್ದೇವೆ ಅಂತಾ ವಿದೇಶಾಂಗ ಇಲಾಖೆ ತಿಳಿಸಿದೆ. ಅಲ್ಲದೇ ವಿದೇಶಾಂಗ ಸಚಿವ ಎಸ್. ಜೈಶಂಕರ್ ಜಾಧವ್ ತಾಯಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ನಡೆಯುತ್ತಿರುವ ಬೆಳವಣಿಗೆ ಬಗ್ಗೆ ಅವರಿಗೆ ಮಾಹಿತಿ ನೀಡಿದ್ದಾರೆ.
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…