Featured

ಕುವೆಂಪು ಅವರ ಬಗ್ಗೆ ಇದ್ದ ವಿಷಯವನ್ನು ಕೈಬಿಡಲಾಗಿದೆ ಹಾಗೂ  ರಾಷ್ಟ್ರಕವಿಗೆ ಅವಮಾನ ಮಾಡಲಾಗಿದೆ ಎಂಬ ಸಂಗತಿ ಸತ್ಯಕ್ಕೆ ದೂರವಾದದ್ದು : ಶಿಕ್ಷಣ ಇಲಾಖೆ ಸ್ಪಷ್ಟನೆ – Vishwanews24

ಪಠ್ಯ ಪುಸ್ತಕವನ್ನು ರೋಹಿತ್ ಚಕ್ರತೀರ್ಥ ಅವರ ಸಮಿತಿ ಪರಿಷ್ಕರಣೆಯನ್ನೇ ಮಾಡಿಲ್ಲ ..

ಕಾಂಗ್ರೆಸ್ ಪಕ್ಷದ ಮುಖಂಡರು ದಿನಕ್ಕೊಂದು ಸುಳ್ಳು ಹೇಳಿ‌ ಜನರ ದಾರಿ ತಪ್ಪಿಸಲು ಸಾಧ್ಯವಿಲ್ಲ

ಕಾಂಗ್ರೆಸ್ ನಾಯಕರು ಮೊದಲು ಪಠ್ಯ ಪುಸ್ತಕವನ್ನು ಓದಬೇಕು, ನಂತರ ಮಾತನಾಡಬೇಕು ಎಂದು ಆಗ್ರಹಿಸಿರುವ ಶಿಕ್ಷಣ ಸಚಿವ

ಬೆಂಗಳೂರು: 4ನೇ ತರಗತಿಯ ಪರಿಸರ ಅಧ್ಯಯನ ಅಭ್ಯಾಸ ಸಹಿತ ಪಠ್ಯ ಪುಸ್ತಕವನ್ನು ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿ ಪರಿಷ್ಕರಣೆ ಮಾಡಿದೆ ಎಂಬ ವಿಚಾರ ಸುಳ್ಳು ಎಂದು ಕರ್ನಾಟಕ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ. ಕುವೆಂಪು ಅವರ ಬಗ್ಗೆ ಇದ್ದ ವಿಷಯವನ್ನು ಕೈಬಿಡಲಾಗಿದೆ ಹಾಗೂ ಈ ಮೂಲಕ ರಾಷ್ಟ್ರಕವಿಗೆ ಅವಮಾನ ಮಾಡಲಾಗಿದೆ ಎಂಬ ಸಂಗತಿ ಸತ್ಯಕ್ಕೆ ದೂರವಾದದ್ದು ಎಂದು ಕರ್ನಾಟಕ ಪಠ್ಯ ಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರು ಸ್ಪಷ್ಟನೆ ನೀಡಿದ್ದಾರೆ.

ಈ ಪುಸ್ತಕವನ್ನು ರೋಹಿತ್ ಚಕ್ರತೀರ್ಥ ಅವರ ಸಮಿತಿ ಪರಿಷ್ಕರಣೆಯನ್ನೇ ಮಾಡಿಲ್ಲ. 2017 – 2018 ರ ಸಾಲಿನಲ್ಲಿ ಬರಗೂರು ರಾಮಚಂದ್ರಪ್ಪ ಅವರ ಸಮಿತಿ ಈ ಪಠ್ಯ ಪುಸ್ತಕವನ್ನು ಪರಿಷ್ಕರಣೆ ಮಾಡಿತ್ತು. 4ನೇ ತರಗತಿಯ ಪರಿಸರ ಅಧ್ಯಯನ ಅಭ್ಯಾಸ ಸಹಿತ ಪಠ್ಯ ಪುಸ್ತಕದ ‘ಪ್ರತಿಯೊಬ್ಬರೂ ವಿಶಿಷ್ಟ’ ಎಂಬ ಪಾಠದಲ್ಲಿ ‘ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ (ಕುವೆಂಪು)’ ಶೀರ್ಷಿಕೆಯ ಅಡಿಯಲ್ಲಿ ಇದ್ದ 9 ಸಾಲುಗಳ ವಿಷಯಾಂಶವನ್ನು 2022 – 23ನೇ ಸಾಲಿನ ಪರಿಸರ ಅಧ್ಯಯನ ಪುಸ್ತಕದಲ್ಲೂ ಯಾವುದೇ ಬದಲಾವಣೆ ಇಲ್ಲದೆ ಮುಂದುವರೆಸಲಾಗಿದೆ ಎಂದು ಕರ್ನಾಟಕ ಪಠ್ಯ ಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರು ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ಈ ಮಾಧ್ಯಮ ಪ್ರಕಟಣೆಯನ್ನು ಟ್ವೀಟ್ ಮಾಡಿರುವ ಶಿಕ್ಷಣ ಸಚಿವ ಬಿ. ಸಿ. ನಾಗೇಶ್, ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ.

ರಾಷ್ಟ್ರಕವಿ ಕುವೆಂಪು ಅವರ ಕುರಿತು ಪಾಠ ಇರುವ 4ನೇ ತರಗತಿ ‘ಪರಿಸರ ಅಧ್ಯಯನ’ ಪುಸ್ತಕದ ಪರಿಷ್ಕರಣೆ ಆಗಿಲ್ಲ. ರಾಜ್ಯ ಬಿಜೆಪಿ ಸರ್ಕಾರದ ಜನಪರ ಕಾರ್ಯಗಳನ್ನು‌ ಸಹಿಸದ ಕಾಂಗ್ರೆಸ್ ಪಕ್ಷದ ಮುಖಂಡರು ದಿನಕ್ಕೊಂದು ಸುಳ್ಳು ಹೇಳಿ‌ ಜನರ ದಾರಿ ತಪ್ಪಿಸಲು ಸಾಧ್ಯವಿಲ್ಲ. ಸುಳ್ಳನ್ನು ಎಷ್ಟು ಸಲ ಹೇಳಿದರು ಸತ್ಯವಾಗದು..! ಎಂದು ಸಚಿವ ಬಿ. ಸಿ. ನಾಗೇಶ್ ಆಕ್ರೋಶ ಹೊರಹಾಕಿದ್ದಾರೆ.

ಕಾಂಗ್ರೆಸ್ ನಾಯಕರು ಮೊದಲು ಪಠ್ಯ ಪುಸ್ತಕವನ್ನು ಓದಬೇಕು, ನಂತರ ಮಾತನಾಡಬೇಕು ಎಂದು ಆಗ್ರಹಿಸಿರುವ ಸಚಿವ ಬಿ. ಸಿ. ನಾಗೇಶ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹಿಂದೆ ಇರುವವರೇ ಅವರ ದಾರಿ ತಪ್ಪಿಸಿದ್ದಾರೆ ಎಂದು ಕಾಲೆಳೆದಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

6 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

6 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

6 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

6 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

6 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

7 hours ago