ಉಡುಪಿ,: ನಿಷೇಧಿತ ಔಷದ ಸಾಗಾಟ ಆರೋಪದಲ್ಲಿ ಕುವೈತ್ ನಲ್ಲಿ ಬಂಧಿಯಾಗಿದ್ದ ಕುಂದಾಪುರ ಬಸ್ರೂರು ನಿವಾಸಿ ಶಂಕರ್ ಪೂಜಾರಿ (40) ಬಿಡುಗಡೆಯಾಗಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಕುವೈತ್ ಅಗ್ರಿಕಲ್ಚರ್ ಪ್ರಾಡಕ್ಟ್ ಸಂಸ್ಥೆಯಲ್ಲಿ ಕೆಲಸ ಮಾಡಿಕೊಂಡಿದ್ದ ಶಂಕರ್ ಪೂಜಾರಿ ಕಳೆದ ವರ್ಷ ಮೇ ತಿಂಗಳಲ್ಲಿ 10 ದಿನಗಳ ರಜೆಯಲ್ಲಿ ಊರಿಗೆ ಬಂದಿದ್ದು, ವಾಪಸು ತೆರಳುವಾಗ ಪರಿಚಯಸ್ಥರು ನೀಡಿದ್ದ ಔಷಧ ಪಾರ್ಸೆಲ್ ನ್ನು ತೆಗೆದುಕೊಂಡು ಹೋಗಿದ್ದರು. ಅದು ಕುವೈತ್ ನಲ್ಲಿ ನಿಷೇಧಿತ ಔಷಧವಾಗಿದ್ದ ಕಾರಣ ವಿಮಾನ ನಿಲ್ದಾಣದಲ್ಲಿ ಇಳಿದ ಶಂಕರ ಪೂಜಾರಿಯವರನ್ನು ಪೊಲೀಸರು ಬಂಧಿಸಿದ್ದರು.
ಶಂಕರ ಪೂಜಾರಿ ಅವರ ಬಿಡುಗಡೆಗೆ ಸಂಬಂಧಿಸಿ ಉಡುಪಿ ಜಿಲ್ಲಾ ಆಡಳಿತ, ಕರವೇ, ಮಾನವ ಹಕ್ಕು ಪ್ರತಿಷ್ಟಾನ,ಕುವೈತ್ ತುಳುಕೂಟ, ಬಿಲ್ಲವ ಸಂಘ ಶ್ರಮಿಸಿದೆ. ಎಲ್ಲರ ಪ್ರಯತ್ನ ಸಹಕಾರದಿಂದ ಪತಿ ನ್ಯಾಯಾಲಯ ಮೂಲಕ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಕುವೈತ್ ಉದ್ಯಮಿ ಪುಷ್ಪರಾಜ್ ಎಂಬವರು ಕರೆ ಮಾಡಿ ವಿಚಾರ ತಿಳಿಸಿದ್ದಾರೆ ಎಂದು ಶಂಕರ್ ಪೂಜಾರಿ ಅವರ ಪತ್ನಿ ಜ್ಯೋತಿ ಬಸ್ರೂರು ತಿಳಿಸಿದ್ದಾರೆ.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…