ಉಡುಪಿ,: ನಿಷೇಧಿತ ಔಷದ ಸಾಗಾಟ ಆರೋಪದಲ್ಲಿ ಕುವೈತ್ ನಲ್ಲಿ ಬಂಧಿಯಾಗಿದ್ದ ಕುಂದಾಪುರ ಬಸ್ರೂರು ನಿವಾಸಿ ಶಂಕರ್ ಪೂಜಾರಿ (40) ಬಿಡುಗಡೆಯಾಗಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಕುವೈತ್ ಅಗ್ರಿಕಲ್ಚರ್ ಪ್ರಾಡಕ್ಟ್ ಸಂಸ್ಥೆಯಲ್ಲಿ ಕೆಲಸ ಮಾಡಿಕೊಂಡಿದ್ದ ಶಂಕರ್ ಪೂಜಾರಿ ಕಳೆದ ವರ್ಷ ಮೇ ತಿಂಗಳಲ್ಲಿ 10 ದಿನಗಳ ರಜೆಯಲ್ಲಿ ಊರಿಗೆ ಬಂದಿದ್ದು, ವಾಪಸು ತೆರಳುವಾಗ ಪರಿಚಯಸ್ಥರು ನೀಡಿದ್ದ ಔಷಧ ಪಾರ್ಸೆಲ್ ನ್ನು ತೆಗೆದುಕೊಂಡು ಹೋಗಿದ್ದರು. ಅದು ಕುವೈತ್ ನಲ್ಲಿ ನಿಷೇಧಿತ ಔಷಧವಾಗಿದ್ದ ಕಾರಣ ವಿಮಾನ ನಿಲ್ದಾಣದಲ್ಲಿ ಇಳಿದ ಶಂಕರ ಪೂಜಾರಿಯವರನ್ನು ಪೊಲೀಸರು ಬಂಧಿಸಿದ್ದರು.
ಶಂಕರ ಪೂಜಾರಿ ಅವರ ಬಿಡುಗಡೆಗೆ ಸಂಬಂಧಿಸಿ ಉಡುಪಿ ಜಿಲ್ಲಾ ಆಡಳಿತ, ಕರವೇ, ಮಾನವ ಹಕ್ಕು ಪ್ರತಿಷ್ಟಾನ,ಕುವೈತ್ ತುಳುಕೂಟ, ಬಿಲ್ಲವ ಸಂಘ ಶ್ರಮಿಸಿದೆ. ಎಲ್ಲರ ಪ್ರಯತ್ನ ಸಹಕಾರದಿಂದ ಪತಿ ನ್ಯಾಯಾಲಯ ಮೂಲಕ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಕುವೈತ್ ಉದ್ಯಮಿ ಪುಷ್ಪರಾಜ್ ಎಂಬವರು ಕರೆ ಮಾಡಿ ವಿಚಾರ ತಿಳಿಸಿದ್ದಾರೆ ಎಂದು ಶಂಕರ್ ಪೂಜಾರಿ ಅವರ ಪತ್ನಿ ಜ್ಯೋತಿ ಬಸ್ರೂರು ತಿಳಿಸಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…