ಕಾರವಾರ: ಕಾಳಿ ನದಿ ಸೇತುವೆಗೆ ಅಡ್ಡಲಾಗಿ ಕಟ್ಟಿದ್ದ ಸೇತುವೆಯು ಕುಸಿದು ಬಿದ್ದಿದ್ದು, ಕಾರವಾರ-ಗೋವಾ ಸಂಚಾರ ತಾತ್ಕಾಲಿಕ ಬಂದ್ ಆಗಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ರಾ.ಹೆ. 66ರಲ್ಲಿ 40 ವರ್ಷದ ಹಿಂದೆ ಕಾಳಿ ನದಿಗೆ ಅಡ್ಡಲಾಗಿ ಕಟ್ಟಲಾಗಿದ್ದ ಸೇತುವೆಯು ಕುಸಿದು ಬಿದ್ದು, ತಮಿಳುನಾಡು ಮೂಲದ ಲಾರಿಯೊಂದು ನದಿಗೆ ಬಿದ್ದಿದೆ. ಘಟನೆಯಲ್ಲಿ ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಮಧ್ಯರಾತ್ರಿ 1 ಗಂಟೆಯ ಸುಮಾರಿಗೆ ಸೇತುವೆ ಕುಸಿದಿದ್ದು, ಗೋವಾದಿಂದ ಹುಬ್ಬಳ್ಳಿಗೆ ಇದೇ ಮಾರ್ಗವಾಗಿ ತೆರಳುತಿದ್ದ ಖಾಲಿ ಲಾರಿಯು ಸೇತುವೆಯಿಂದ ಕೆಳಗೆ ಬಿದ್ದಿದೆ. ಬಳಿಕ ಈ ಚಾಲಕ ಲಾರಿಯ ಕ್ಯಾಬಿನ್ ಮೇಲೆ ನಿಂತು ಕೂಗಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯ ಮೀನುಗಾರರು ಕರಾವಳಿ ಕಾವಲು ಪಡೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಕರಾವಳಿ ಕಾವಲುಪಡೆ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರ ಸಹಾಯದೊಂದಿಗೆ ಚಾಲಕನನ್ನು ರಕ್ಷಿಸಲಾಗಿದೆ.
ಕಾಳಿ ನದಿಯ ಸೇತುವೆಯು ಮೂರು ಕಡೆಗಳಲ್ಲಿ ಕುಸಿದಿದೆ. ಕಾರವಾರದಿಂದ ಗೋವಾ ಕಡೆಗೆ ತೆರಳುವ ಮೊದಲ ಭಾಗ, ನಂತರ ಮಧ್ಯ ಭಾಗ, ಅದರ ನಂತರ ಗೋವಾದಿಂದ ಕಾರವಾರದ ಕಡೆ ಬರುವ ಪ್ರಾರಂಭದಲ್ಲಿ ಸೇತುವೆಯ ಮೇಲ್ಛಾವಣಿ ಹಾಸು ಕುಸಿದಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…