Featured

ಕುಸ್ತಿಪಟು ಬಜರಂಗ ಪುನಿಯಾ 4 ವರ್ಷ ಅಮಾನತು – vishwanews24

ಕುಸ್ತಿಪಟು ಬಜರಂಗ ಪುನಿಯಾ 4 ವರ್ಷ ಅಮಾನತು

ನವದೆಹಲಿ: ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ ಕುಸ್ತಿಪಟು ಬಜರಂಗ್ ಪುನಿಯಾ  ಅವರನ್ನ ನಾಲ್ಕು ವರ್ಷಗಳ ಕಾಲ ಬ್ಯಾನ್‌ ಮಾಡಿದೆ.

ಮಾರ್ಚ್ 10 ರಂದು ಸೋನೆಪತ್‌ನಲ್ಲಿ ನಡೆದ ರಾಷ್ಟ್ರೀಯ ತಂಡದ ಆಯ್ಕೆಗೆ ನಡೆದ ಟ್ರಯಲ್ಸ್‌ನಲ್ಲಿ ಆಯ್ಕೆಯಾದ ನಂತರ ಪುನಿಯಾ ಮೂತ್ರದ ಮಾದರಿಯನ್ನು  ಪರೀಕ್ಷೆಗೆ ನೀಡಲಿ ನಿರಾಕರಿಸಿದರು. ಇದನ್ನು ನಿಯಮ ಬಾಹಿರ ಎಂದು ಪರಿಗಣಿಸಿರುವ ನಾಡಾ ಪೂನಿಯಾರನ್ನ ನಾಲ್ಕು ವರ್ಷಗಳ ಕಾಲ ಬ್ಯಾನ್‌ ಮಾಡಿದೆ. ಕಳೆದ ಏಪ್ರಿಲ್‌ 23ರಂದು ಪುನಿಯಾರನ್ನ ನಾಡಾ ಮೊದಲಬಾರಿಗೆ ಅಮಾನತುಗೊಳಿಸಿತ್ತು. ನಂತರ ವಿಶ್ವ ಕುಸ್ತಿ ಆಡಳಿತ ಮಂಡಳಿ ಸಹ ಅವರನ್ನ ಅಮಾನತುಗೊಳಿಸಿತ್ತು. ಇದರ ವಿರುದ್ಧ ಪುನಿಯಾ ಮೇಲ್ಮನವಿ ಸಲ್ಲಿಸಿದ್ದರು. ಆದ್ರೆ ನಾಡಾದ ಆಂಟಿ-ಡಿಸಿಪ್ಲಿನರಿ ಡೋಪಿಂಗ್ ಪ್ಯಾನೆಲ್  ಮುಂದಿನ ಸೂಚನೆ ನೀಡುವವರೆಗೆ ಮೇಲ್ಮನವಿಯನ್ನು ರದ್ದುಗೊಳಿಸಿತ್ತು.

ನಾಡಾಗೆ ಮೂತ್ರ ಮಾದರಿಯನ್ನು ನೀಡದೇ ಇದ್ದದ್ದು ಯಾಕೆ? ಎಂದು ಜೂನ್‌ 23 ರಂದು ಕುಸ್ತಿಪಟುಗೆ ನೋಟಿಸ್‌ ನೀಡಿತ್ತು. ಸೆಪ್ಟೆಂಬರ್ 20 ಮತ್ತು ಅಕ್ಟೋಬರ್ 4 ರಂದು ವಿಚಾರಣೆ ನಡೆಸಲಾಗಿತ್ತು. ಇದೀಗ ಆದೇಶ ಪ್ರಕಟಿಸಿರುವ ಎಡಿಡಿಪಿ, ಕಲಂ 10.3.1 ರ ಅಡಿಯಲ್ಲಿ ನಿರ್ಬಂಧಗಳಿಗೆ ಅಥ್ಲೀಟ್ ಹೊಣೆಗಾರನಾಗಿರುತ್ತಾನೆ ಮತ್ತು 4 ವರ್ಷಗಳ ಅವಧಿಗೆ ಅನರ್ಹತೆಗೆ ಹೊಣೆಗಾರನಾಗಿರುತ್ತಾನೆ ಎಂದು ಹೇಳಿದೆ. ಈ ಸಂದರ್ಭದಲ್ಲಿ ಬಜರಂಗ್ ಪುನಿಯಾ ಸ್ಪರ್ಧಾತ್ಮಕ ಕುಸ್ತಿಗೆ ಮರಳಲು ಮತ್ತು ವಿದೇಶದಲ್ಲಿ ಕೋಚಿಂಗ್‌ ಕೆಲಸಕ್ಕೆ ಅರ್ಜಿ ಸಲ್ಲಿಸಲು ಸಾಧ್ಯವಾಗುವುದಿಲ್ಲ ಎಂದು ಸಹ ತನ್ನ ಆದೇಶದಲ್ಲಿ ತಿಳಿದಿದೆ.

 

 

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

19 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago