Featured

ಕುಸ್ತಿ ನನ್ನ ವಿರುದ್ದ ಗೆದ್ದಿದೆ, ನಾನು ಸೋತಿದ್ದೇನೆ  : ನಿವೃತ್ತಿ ಘೋಷಣೆ ಮಾಡಿದ ವಿನೇಶ್ ಫೋಗಟ್‌ – vishwanews24

ಕುಸ್ತಿ ನನ್ನ ವಿರುದ್ದ ಗೆದ್ದಿದೆ, ನಾನು ಸೋತಿದ್ದೇನೆ  : ನಿವೃತ್ತಿ ಘೋಷಣೆ ಮಾಡಿದ ವಿನೇಶ್ ಫೋಗಟ್‌

ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್‌ನ ಕುಸ್ತಿ ಫೈನಲ್‌ನಿಂದ ಅನರ್ಹಗೊಂಡ ಬೆನ್ನಲ್ಲೇ ವಿನೇಶ್ ಫೋಗಟ್ ಕುಸ್ತಿಗೆ ವಿದಾಯ ಹೇಳಿದ್ದಾರೆ. ಫೈನಲ್‌ ಪ್ರವೇಶಿಸಿ ಇತಿಹಾಸ ಬರೆಯಬೇಕಿದ್ದ ಭಾರತದ ಹೆಮ್ಮೆಯ ಪುತ್ರಿ ಕುಸ್ತಿಪಟು ವಿನೇಶ್‌ ಫೋಗಾಟ್‌ ಕೇವಲ 100 ಗ್ರಾಂ ತೂಕ ಹೆಚ್ಚಳವಾದ ಕಾರಣ ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಲಾಗಿತ್ತು.

ವಿನೇಶ್ ಫೋಗಟ್ ಗುರುವಾರ ಬೆಳಗ್ಗೆ ಟ್ವೀಟ್ ಮಾಡಿ ನಿವೃತ್ತಿ ಘೋಷಣೆ ಮಾಡಿದ್ದಾರೆ, “ಕುಸ್ತಿ ನನ್ನ ವಿರುದ್ದ ಗೆದ್ದಿದೆ. ನಾನು ಸೋತಿದ್ದೇನೆ. ನಿಮ್ಮ ಕನಸು ಹಾಗೂ ನನ್ನ ಧೈರ್ಯ ಎಲ್ಲವೂ ನುಚ್ಚುನೂರಾಯಿತು ಈಗ ನನಗೆ ಇದಕ್ಕಿಂತ ಹೆಚ್ಚಿನ ಶಕ್ತಿ ಇಲ್ಲ. 2021-2024 ಕುಸ್ತಿಗೆ ವಿದಾಯ. ನನ್ನನ್ನು ಕ್ಷಮಿಸಿದ್ದಕ್ಕೆ ನಿಮ್ಮೆಲ್ಲರಿಗೂ ನಾನು ಋಣಿಯಾಗಿರುತ್ತೇನೆ” ಎಂದು ಪೋಸ್ಟ್ ಹಾಕಿದ್ದಾರೆ.

ಈ ಮೊದಲು 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದ ವಿನೇಶ್‌ ಈ ಬಾರಿ ಅವಕಾಶ ಸಿಗದ ಕಾರಣ 50 ಕೆಜಿ ವಿಭಾಗದಲ್ಲಿ ಸ್ಪರ್ಧೆಗೆ ಇಳಿದಿದ್ದರು. ವಿನೇಶ್‌ ಅವರ ತೂಕ 50 ಕೆಜಿ, 100 ಗ್ರಾಂ ಇದ್ದ ಕಾರಣ ಅವರನ್ನು ಅನರ್ಹಗೊಳಿಸಲಾಯಿತು. 2.8 ಕೆಜಿ ತೂಕ ಇಳಿಸಲು ರಾತ್ರಿಯಿಡೀ ಸೈಕ್ಲಿಂಗ್‌, ಸ್ಕಿಪ್ಪಿಂಗ್‌, ರನ್ನಿಂಗ್‌ ಮಾಡಿದ ವಿನೇಶ್‌, ಒಂದೂ ತೊಟ್ಟು ನೀರು ಕೂಡ ಕುಡಿಯದೇ ಬೆವರು ಸುರಿಸಿದ್ದರು. ಆದರೂ 100 ಹೆಚ್ಚಿಗೆ ಇದ್ದ‌ ಕಾರಣ ಅವರನ್ನು ಅನರ್ಹಗೊಳಿಸಲಾಗಿದೆ. ಇದರಿಂದ ಮಾನಸಿಕವಾಗಿ ಕುಗ್ಗಿಹೋಗಿದ್ದ ವಿನೇಶ್‌ ಫೋಗಾಟ್‌ ಕುಸ್ತಿ ಜಗತ್ತಿಗೆ ವಿದಾಯ ಹೇಳಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

6 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago