ಕು೦ದಾಪುರದಿ೦ದ ಭಟ್ಕಳಕ್ಕೆ ಕಾರಿನಲ್ಲಿಅಕ್ರಮ ಗೋ ಮಾಂಸ ಸಾಗಾಟ ಪತ್ತೆ: ಓರ್ವನ ಬಂಧನ – Vishwanews24
ಕು೦ದಾಪುರದಿ೦ದ ಭಟ್ಕಳಕ್ಕೆ ಕಾರಿನಲ್ಲಿಅಕ್ರಮ ಗೋ ಮಾಂಸ ಸಾಗಾಟ ಪತ್ತೆ: ಓರ್ವನ ಬಂಧನ
ಬೈಂದೂರು : ಕು೦ದಾಪುರದಿ೦ದ ಭಟ್ಕಳಕ್ಕೆ ಗೋಮಾ೦ಸ ಸಾಗಾಟ ಮಾಡುತ್ತಿದ್ದ ನ್ಯಾನೋ ಕಾರನ್ನು ತಡೆದು ನಿಲ್ಲಿಸಿದಬೈಂದೂರು ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಇನ್ನೋರ್ವ ಕಾರಿನಿಂದ ಇಳಿದುಪರಾರಿಯಾಗಿರುವ ಘಟನೆ ಬೈ೦ದೂರು ತಾಲೂಕಿನ ಯಡ್ತರೆ ಗ್ರಾಮದ ಹೊಸ ಬಸ್ ನಿಲ್ದಾಣದ ಬಳಿ ಆ. 20ರಂದು ನಡೆದಿದೆ.
ಭಟ್ಕಳ ನಿವಾಸಿ 37ವರ್ಷದ ಮಹಮ್ಮದ್ ಗೌಸ್ ಗವಾಯಿ ಬಂಧಿತ ಆರೋಪಿ. ಪರಾರಿಯಾದಆರೋಪಿಯನ್ನು ನಜ್ಮುಲ್ ಎ೦ದು ತಿಳಿದುಬಂದಿದೆ. ಕಾರಿನಲ್ಲಿ ಸುಮಾರು 22ಸಾವಿರ ರೂ ಮೌಲ್ಯದ 150 ಕೆ.ಜಿ ಗೋ ಮಾಂಸ ಪತ್ತೆಯಾಗಿದೆ
ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
