ಉಡುಪಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿಮಸೂದೆಯ ವಿರುದ್ಧ ರಾಜಕೀಯ ಪಕ್ಷಗಳು ಸೇರಿ ಹೋರಾಟ ಮಾಡುತ್ತಿರುವವರು ಡೋಂಗಿಗಳು ಮತ್ತು ಇವರ ಇಬ್ಬಗೆಯ ನೀತಿ ತೋರಿಸುತ್ತಿದೆ ಎಂದರು.
ಅವರು ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದರು.
ಕೇಂದ್ರ ಸರ್ಕಾರ ಈ ಮಸೂದೆಯನ್ನು ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರ ಜತೆ ಚರ್ಚಿಸಿ ಪಾಸ್ ಮಾಡಲಾಗಿದೆ ಈಗ ಇವರುಗಳು ಡ್ರಾಮ ಮಾಡುತ್ತಿದ್ದಾರೆ.ರೈತರನ್ನು ಮುಂದೆ ತೋರಿಸಿ ಉಳಿದ ರಾಜಕೀಯ ಪಕ್ಷಗಳು ಬಿಜೆಪಿ ಯನ್ನು ವಿರೋಧಿಸುವ ದೃಷ್ಟಿಯಿಂದ ಈ ಮಸೂದೆಯನ್ನು ವಿರೋಧ ಮಾಡುತ್ತಿದ್ದಾರೆ ಎಂದರು.
APMC ಯಲ್ಲಿ ಮಧ್ಯವರ್ತಿ ಹಾವಳಿ ತಪ್ಪಿಸಿ ನೇರವಾಗಿ ಕೃಷಿಕರಿಗೆ ಲಾಭ ಮಾಡುವ ಉದ್ದೇಶದಿಂದ ಈ ಮಸೂದೆ ಪಾಸ್ ಆಗಿದೆ. ತುಕುಡೆ ಗ್ಯಾಂಗ್ ನ ವ್ಯವಸ್ಥಿತ ಷಡ್ಯಂತ್ರಕ್ಕೆ ರೈತರು ಬಲಿಯಾಗಬಾರದು, ಹಿಂದೆ ಶರತ್ ಪವರ್ ಕೇಂದ್ರದ ಕೃಷಿ ಸಚಿವರಾಗಿದ್ದಾಗ ಕೂಡ ಈ ಮಸೂದೆಯ ಬಗ್ಗೆ ಎಲ್ಲಾ ರಾಜ್ಯಕ್ಕೆ ಪತ್ರ ಬರೆದಿದ್ದರು ಎಂದರು.ರೈತರ ಹೆಸರಿನಲ್ಲಿ ಜೆ.ಎನ್.ಯು ವಿದ್ಯಾರ್ಥಿಗಳು ಕೂಡ ರಸ್ತೆಗೆ ಬಂದು ಪ್ರತಿಭಟನೆ ಮಾಡುತ್ತಿರುವುದು ಹಾಸ್ಯಸ್ಪದ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್,ಪ್ರ.ಕಾರ್ಯದರ್ಶಿ ಕುತ್ಯಾರ್ ನವೀನ್ ಶೆಟ್ಟಿ,ಶಾಸಕ ರಘಪತಿ ಭಟ್,ರಾಜ್ಯ ಕಾರ್ಯಕಾರಿಣಿ ಸದಸ್ಯೆ ಗೀತಾಂಜಲಿ ಸುವರ್ಣ, ಮಹಿಳಾಮೋರ್ಚ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ,ಜಿಲ್ಲಾ ವಕ್ತಾರ ಗುರುಪ್ರಸಾದ್ ಮೊದಲಾದವರು ಉಪಸ್ಥಿತಿತರಿದ್ದರು.
ಬ್ಯುರೋ ರಿಪೋರ್ಟ್- ವಿಶ್ವನ್ಯೂಸ್24
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…