Featured

ಕೃಷಿ ಕಾಯ್ದೆ ವಾಪಸ್ : ಕೊನೆಗೂ ಕೇಂದ್ರ ಸರ್ಕಾರಕ್ಕೆ ಜ್ಞಾನೋದಯ ಆಗಿರುವುದು ಉತ್ತಮ ಬೆಳವಣಿಗೆ : ಹೆಚ್.ಡಿ ಕುಮಾರಸ್ವಾಮಿ – Vishwanews24

ಕೃಷಿ ಕಾಯ್ದೆ ವಾಪಸ್ : ಕೊನೆಗೂ ಕೇಂದ್ರ ಸರ್ಕಾರಕ್ಕೆ ಜ್ಞಾನೋದಯ ಆಗಿರುವುದು ಉತ್ತಮ ಬೆಳವಣಿಗೆ : ಹೆಚ್.ಡಿ ಕುಮಾರಸ್ವಾಮಿ – Vishwanews24

ಬೆಂಗಳೂರು: ಕೊನೆಗೂ ಕೇಂದ್ರ ಸರ್ಕಾರಕ್ಕೆ ಜ್ಞಾನೋದಯ ಆಗಿರುವುದು ಉತ್ತಮ ಬೆಳವಣಿಗೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.

ಕಳೆದ ವರ್ಷ ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ 3 ಕೃಷಿ ಕಾನೂನನ್ನು ವಿರೋಧಿಸಿ ದೇಶಾದ್ಯಂತ ರೈತರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿ ನಿರಂತರ ಪ್ರತಿಭಟನೆ ನಡೆಸುತ್ತಿದ್ದರು. ಇದೀಗ ರೈತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ 3 ಕೃಷಿ ಕಾನೂನನ್ನು ರದ್ದುಗೊಳಿಸಿದೆ.

ಈ ಕುರಿತಂತೆ ಹೆಚ್.ಡಿ ಕುಮಾರಸ್ವಾಮಿ ಅವರು ತಮ್ಮ ಟ್ವಿಟ್ಟರ್‌ನಲ್ಲಿ, ರೈತರ ಆಕ್ರೋಶಕ್ಕೆ ಗುರಿಯಾಗಿದ್ದ 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವುದು ಸ್ವಾಗತಾರ್ಹ. ಕೊನೆಗೂ ಕೇಂದ್ರಕ್ಕೆ ಜ್ಞಾನೋದಯ ಆಗಿರುವುದು ಉತ್ತಮ ಬೆಳವಣಿಗೆ. ರೈತರ ಜತೆ ಚರ್ಚೆ ನಡೆಸದೇ ಈ ಕಾಯ್ದೆಗಳ ಏಕಪಕ್ಷೀಯ ಜಾರಿ ಮತ್ತು ಈಗ ಏಕಾಏಕಿ ರದ್ದತಿ ಅನೇಕ ಪ್ರಶ್ನೆ ಹುಟ್ಟುಹಾಕಿದೆ ಎಂದಿದ್ದಾರೆ.

ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಇದೆ. ಕೇಂದ್ರದ ನಿರ್ಧಾರ ಪ್ರಾಮಾಣಿಕವಾಗಿರಲಿ. ಕೇವಲ ಮತ ಫಸಲಿಗೆ ಮಾಡಿದ ಹೈಡ್ರಾಮಾ ಆಗದಿರಲಿ. ಚುನಾವಣೆ ಮುಗಿದ ಮೇಲೆ ಆ ಕರಾಳ ಕಾಯ್ದೆಗಳನ್ನು ಬೇರೆ ರೂಪದಲ್ಲಿ ಪುನಃ ಜಾರಿ ಮಾಡುವುದಿಲ್ಲ ಎಂದು ಪ್ರಧಾನಿಗಳು ತಮ್ಮ ಭಾಷಣದಲ್ಲಿ ರೈತರಿಗೆ ಮಾತು ಕೊಡಬೇಕಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ದೆಹಲಿ, ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಸೇರಿದಂತೆ ದೇಶದ ನಾನಾ ಕಡೆ ರೈತರ ವಿರುದ್ಧ ನಡೆದಿರುವ ದೌರ್ಜನ್ಯಕ್ಕೆ ಪ್ರಧಾನಿಗಳು ತಮ್ಮ ಭಾಷಣದಲ್ಲಿ ಕ್ಷಮೆ ಯಾಚನೆ ಮಾಡಬೇಕಿತ್ತು. ಈಗಲಾದರೂ ರೈತರ ಮೇಲೆ ಹಿಂಸಾಚಾರ ನಡೆಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲೇಬೇಕು ಎಂಬುದು ನನ್ನ ಒತ್ತಾಯ ಎಂದು ತಿಳಿಸಿದ್ದಾರೆ.

Vishwa News 24

Recent Posts

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ – vishwanews24

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…

5 minutes ago

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ – vishwanews24

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…

20 minutes ago

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ – vishwanews24

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…

4 hours ago

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

4 hours ago

ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ – vishwanews24

ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ ಶಿರ್ವ: ಶಿರ್ವ ಮತ್ತು ಕುತ್ಯಾರು ಗ್ರಾ.ಪಂ.…

4 hours ago

ಗ್ಯಾಸ್ ಏಜೆನ್ಸಿಗಳಿಂದ ಎಲ್‌ಪಿಜಿ ಪೂರೈಕೆ: ನೆಟ್‌ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ – vishwanews24

ಗ್ಯಾಸ್ ಏಜೆನ್ಸಿಗಳಿಂದ ಎಲ್‌ಪಿಜಿ ಪೂರೈಕೆ: ನೆಟ್‌ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ ಮಣಿಪಾಲ: ನೆಟ್‌ವರ್ಕ್‌…

4 hours ago