Featured

ಕೃಷಿ ಕಾಯ್ದೆ ವಾಪಸ್ : ಕೊನೆಗೂ ಕೇಂದ್ರ ಸರ್ಕಾರಕ್ಕೆ ಜ್ಞಾನೋದಯ ಆಗಿರುವುದು ಉತ್ತಮ ಬೆಳವಣಿಗೆ : ಹೆಚ್.ಡಿ ಕುಮಾರಸ್ವಾಮಿ – Vishwanews24

ಕೃಷಿ ಕಾಯ್ದೆ ವಾಪಸ್ : ಕೊನೆಗೂ ಕೇಂದ್ರ ಸರ್ಕಾರಕ್ಕೆ ಜ್ಞಾನೋದಯ ಆಗಿರುವುದು ಉತ್ತಮ ಬೆಳವಣಿಗೆ : ಹೆಚ್.ಡಿ ಕುಮಾರಸ್ವಾಮಿ – Vishwanews24

ಬೆಂಗಳೂರು: ಕೊನೆಗೂ ಕೇಂದ್ರ ಸರ್ಕಾರಕ್ಕೆ ಜ್ಞಾನೋದಯ ಆಗಿರುವುದು ಉತ್ತಮ ಬೆಳವಣಿಗೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.

ಕಳೆದ ವರ್ಷ ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ 3 ಕೃಷಿ ಕಾನೂನನ್ನು ವಿರೋಧಿಸಿ ದೇಶಾದ್ಯಂತ ರೈತರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿ ನಿರಂತರ ಪ್ರತಿಭಟನೆ ನಡೆಸುತ್ತಿದ್ದರು. ಇದೀಗ ರೈತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ 3 ಕೃಷಿ ಕಾನೂನನ್ನು ರದ್ದುಗೊಳಿಸಿದೆ.

ಈ ಕುರಿತಂತೆ ಹೆಚ್.ಡಿ ಕುಮಾರಸ್ವಾಮಿ ಅವರು ತಮ್ಮ ಟ್ವಿಟ್ಟರ್‌ನಲ್ಲಿ, ರೈತರ ಆಕ್ರೋಶಕ್ಕೆ ಗುರಿಯಾಗಿದ್ದ 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವುದು ಸ್ವಾಗತಾರ್ಹ. ಕೊನೆಗೂ ಕೇಂದ್ರಕ್ಕೆ ಜ್ಞಾನೋದಯ ಆಗಿರುವುದು ಉತ್ತಮ ಬೆಳವಣಿಗೆ. ರೈತರ ಜತೆ ಚರ್ಚೆ ನಡೆಸದೇ ಈ ಕಾಯ್ದೆಗಳ ಏಕಪಕ್ಷೀಯ ಜಾರಿ ಮತ್ತು ಈಗ ಏಕಾಏಕಿ ರದ್ದತಿ ಅನೇಕ ಪ್ರಶ್ನೆ ಹುಟ್ಟುಹಾಕಿದೆ ಎಂದಿದ್ದಾರೆ.

ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಇದೆ. ಕೇಂದ್ರದ ನಿರ್ಧಾರ ಪ್ರಾಮಾಣಿಕವಾಗಿರಲಿ. ಕೇವಲ ಮತ ಫಸಲಿಗೆ ಮಾಡಿದ ಹೈಡ್ರಾಮಾ ಆಗದಿರಲಿ. ಚುನಾವಣೆ ಮುಗಿದ ಮೇಲೆ ಆ ಕರಾಳ ಕಾಯ್ದೆಗಳನ್ನು ಬೇರೆ ರೂಪದಲ್ಲಿ ಪುನಃ ಜಾರಿ ಮಾಡುವುದಿಲ್ಲ ಎಂದು ಪ್ರಧಾನಿಗಳು ತಮ್ಮ ಭಾಷಣದಲ್ಲಿ ರೈತರಿಗೆ ಮಾತು ಕೊಡಬೇಕಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ದೆಹಲಿ, ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಸೇರಿದಂತೆ ದೇಶದ ನಾನಾ ಕಡೆ ರೈತರ ವಿರುದ್ಧ ನಡೆದಿರುವ ದೌರ್ಜನ್ಯಕ್ಕೆ ಪ್ರಧಾನಿಗಳು ತಮ್ಮ ಭಾಷಣದಲ್ಲಿ ಕ್ಷಮೆ ಯಾಚನೆ ಮಾಡಬೇಕಿತ್ತು. ಈಗಲಾದರೂ ರೈತರ ಮೇಲೆ ಹಿಂಸಾಚಾರ ನಡೆಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲೇಬೇಕು ಎಂಬುದು ನನ್ನ ಒತ್ತಾಯ ಎಂದು ತಿಳಿಸಿದ್ದಾರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

5 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

5 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

5 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

6 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

6 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

6 hours ago