ನವದೆಹಲಿ: ರೈತ ವಿರೋಧಿ ಮೂರೂ ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಪ್ರಧಾನ ಮಂತ್ರಿಯವರ ಘೋಷಣೆಯು ಬದಲಾವಣೆ ಅಥವಾ ಹೃದಯದ ಬದಲಾವಣೆಯಿಂದ ಪ್ರೇರಿತವಾಗಿಲ್ಲ. ಇದು ಚುನಾವಣೆಯ ಭಯದಿಂದ ಆಗಿದೆ ಎಂದು ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, “ಪ್ರಜಾಸತ್ತಾತ್ಮಕ ಪ್ರತಿಭಟನೆಗಳಿಂದ ಏನನ್ನು ಸಾಧಿಸಲಾಗದ್ದನ್ನ ಮುಂಬರುವ ಚುನಾವಣೆಯ ಭಯದಿಂದ ಸಾಧಿಸಬಹುದು! ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವ ಕುರಿತು ಪ್ರಧಾನ ಮಂತ್ರಿಯವರ ಘೋಷಣೆಯು ನೀತಿಯ ಬದಲಾವಣೆ ಅಥವಾ ಹೃದಯದ ಬದಲಾವಣೆಯಿಂದ ಪ್ರೇರಿತವಾಗಿಲ್ಲ. ಇದು ಚುನಾವಣೆಯ ಭಯದಿಂದ ಆಗಿದೆ ಎಂದಿದ್ದಾರೆ.
ಇನ್ನು ವಕೀಲ ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿ, “ಅಂತಿಮವಾಗಿ ರೈತರನ್ನು ಸಂಕಷ್ಟಕ್ಕೆ ದೂಡಿದ ಒಂದು ವರ್ಷದ ನಂತರ, 3 ಕೃಷಿ ಕಾನೂನುಗಳನ್ನು (ತನ್ನ ಆಪ್ತರಾದ ಅಂಬಾನಿ/ಅದಾನಿಗಳಿಗೆ ಕೃಷಿ ಕ್ಷೇತ್ರವನ್ನು ನೀಡಲು ವಿನ್ಯಾಸಗೊಳಿಸಲಾಗಿದ್ದ) ಋಣಾತ್ಮಕ ಚುನಾವಣಾ ಪರಿಣಾಮವನ್ನು ನೋಡಿದ ನಂತರ, ಅವುಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ಘೋಷಿಸಿದ್ದಾರೆ” ಎಂದು ಹೇಳಿದ್ದಾರೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…