ಬೆಂಗಳೂರು: ಕೊನೆಗೂ ಅನ್ನದಾತರ ಹೋರಾಟಕ್ಕೆ ಕೇಂದ್ರ ಸರ್ಕಾರ ಮಣಿದಿದ್ದು, ಈ ಹಿನ್ನೆಲೆಯಲ್ಲಿ ರೈತರಿಗೆ ಕನ್ನಡ ಚಳವಳಿ ವಾಟಾಳ್ ಪಕ್ಷ ಅಧ್ಯಕ್ಷ ವಾಟಾಳ್ ನಾಗರಾಜ್ ಅಭಿನಂದನೆ ಸಲ್ಲಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಸತತವಾಗಿ 15 ತಿಂಗಳುಗಳಿಂದ ಮೂರು ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತರು ನಡೆಸಿದ ಹೋರಾಟಕ್ಕೆ ದೇಶಾದ್ಯಂತ ರೈತರು, ಹೋರಾಟಗಾರರು ಜೊತೆಗೂಡಿ ಕೇಂದ್ರ ಸರ್ಕಾರದ ಮೊಂಡುತನದ ಮೂರು ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸಿದ್ದರು. ಕರ್ನಾಟಕದಲ್ಲಿ ಕೂಡ ರೈತರ ಪರವಾಗಿ 3 ಕೃಷಿ ಕಾಯ್ದೆ ವಿರುದ್ಧ ಹೋರಾಟ ನಡೆಸಿದ್ದು, ಇದೀಗ ಈ ಹೋರಾಟಕ್ಕೆ ಪ್ರತಿಫಲ ಸಿಕ್ಕಿದೆ. ಹೀಗಾಗಿ ಮತ್ತೊಮ್ಮೆ ದೇಶದ ಅನ್ನದಾತರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.
ವಿವಾದಿತ ಕೃಷಿ ಕಾಯ್ದೆಯನ್ನು ವಾಪಸ್ ಪಡೆದುಕೊಂಡಿದೆ. ದೇಶದ ರೈತರ 355 ದಿನಗಳ ಹೋರಾಟದ ನಂತರ ಫಲ ಸಿಕ್ಕಂತಾಗಿದೆ. ಕೃಷಿ ಕಾನೂನು ಹೋರಾಟದಲ್ಲಿ 600ಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡಿದ್ದಾರೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…