ಕಾಪು : ಮೂರು ಕೃಷಿ ಕಾಯಿದೆಗಳನ್ನು ರದ್ಧುಗೊಳಿಸುವ ಮೂಲಕ ಕೇಂದ್ರ ಸರ್ಕಾರವು ಮೊದಲ ಬಾರಿಗೆ ರೈತ ಪರವಾದ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, “ಇದು ಕಾಂಗ್ರೆಸ್ ಪಕ್ಷ ಸಹಿತ ರಾಜಕೀಯ ಪಕ್ಷಗಳು, ರೈತ ಪರ ಸಂಘಟನೆಗಳು, ರೈತರು ಮತ್ತು ಹೋರಾಟಗಾರರ ಹೋರಾಟಕ್ಕೆ ಸಂದ ಗೆಲುವಾಗಿದೆ” ಎಂದರು.
ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ ಹುಟ್ಟು ಹಬ್ಬದ ದಿನದಂದೇ ಕೇಂದ್ರ ಸರಕಾರ ರೈತ ವಿರೋಧಿ ಕಾಯ್ದೆಗಳನ್ನು ರದ್ಧುಗೊಳಿಸುವ ಮೂಲಕ ಪ್ರಜಾಪ್ರಭುತ್ವ ರಾಷ್ಟದಲ್ಲಿ ನಾವೆಲ್ಲರೂ ಜೊತೆಗೂಡಿ ನಡೆಸಿದ ಹೋರಾಟಕ್ಕೆ ಗೌರವ ನೀಡಿದೆ” ಎಂದಿದ್ದಾರೆ.
ಇನ್ನು ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮೂರು ಕೃಷಿ ಕಾಯ್ದೆ ರದ್ದುಗೊಳಿಸಿದಕ್ಕೆ ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸುತ್ತೇನೆ. ರೈತರ ಬೇಡಿಕೆಯಂತೆ 3 ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವ ಐತಿಹಾಸಿಕ ನಿರ್ಧಾರ ಕೈಗೊಂಡಿದ್ದಕ್ಕಾಗಿ ವಂದನೆಗಳು” ಎಂದು ಹೇಳಿದ್ದಾರೆ.
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…