ಬೆಂಗಳೂರು: ರೈತರ ಭಾವನೆಗಳಿಗೆ ಬೆಲೆ ಕೊಟ್ಟಿದ್ದು, ಇದಕ್ಕೂ ಪಂಚರಾಜ್ಯ ಚುನಾವಣೆಗಳಿಗೂ ಸಂಬಂಧವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕೃಷಿ ಕಾಯ್ದೆ ವಾಪಸ್ ಪಡೆದ ವಿಚಾರಕ್ಕೆ ಪ್ರತಿಕ್ರಿಯಿಸಿ, ಯುಪಿಎ ಅವಧಿಯಲ್ಲಿ ಜಾಗತೀಕರಣ, ಉದಾರೀಕರಣ ಆದ ಮೇಲೆ ಹೊಸ ಕಾಯ್ದೆ ಬಂದಿವೆ. ಯುಪಿಎ ಸರ್ಕಾರದಲ್ಲಿ ಕರಡು ಇತ್ತು. ಎಲ್ಲಾ ರಾಜ್ಯಗಳ ಅಭಿಪ್ರಾಯ ಪಡೆದು ಜಾರಿ ಮಾಡಲಾಗಿತ್ತು. ಪಂಜಾಬ್, ಹರಿಯಾಣದ ರೈತರು ವಿರೋಧ ಮಾಡಿದ್ರು. ಪ್ರಧಾನಿಗಳು ಈಗ ಕಾಯ್ದೆ ವಾಪಸ್ ಪಡೆಯುತ್ತೇವೆ ಅಂತ ಹೇಳಿದ್ದಾರೆ. ಇದು ಸ್ಪಂದನಾಶೀಲ ಸರ್ಕಾರ ಇದು. ಹೀಗಾಗಿ ರೈತರ ಭಾವನೆಗೆ ಬೆಲೆ ಕೊಟ್ಟಿದ್ದೇವೆ. ಇದಕ್ಕೂ ಪಂಚರಾಜ್ಯ ಚುನಾವಣೆಗೂ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ದೇಶದಲ್ಲಿ ನಡೆದ ಉಪ ಚುನಾವಣೆಗಳಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆದ್ದಿದೆ. ಹೀಗಾಗಿ ಚುನಾವಣೆ ದೃಷ್ಟಿಯಿಂದ ಪ್ರಧಾನಿಗಳು ಈ ನಿರ್ಧಾರ ಮಾಡಿಲ್ಲ. ರೈತರಿಗೆ ಕಾಯ್ದೆ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಿಯವರು ಮಾಡಿದರು. ಆದರೆ ಅದು ಹೋರಾಟ ಮಾಡೋರಿಗೆ ಅರ್ಥ ಆಗಿರಲಿಲ್ಲ. ಹೀಗಾಗಿ ವಿಶ್ವಾಸ ಬರಬೇಕು ಅನ್ನೋ ದೃಷ್ಟಿಯಿಂದ ಈ ಕಾಯ್ದೆ ವಾಪಸ್ ಪಡೆದಿದ್ದಾರೆ ಎಂದರು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…