ಬೆಂಗಳೂರು: ರೈತರ ಭಾವನೆಗಳಿಗೆ ಬೆಲೆ ಕೊಟ್ಟಿದ್ದು, ಇದಕ್ಕೂ ಪಂಚರಾಜ್ಯ ಚುನಾವಣೆಗಳಿಗೂ ಸಂಬಂಧವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕೃಷಿ ಕಾಯ್ದೆ ವಾಪಸ್ ಪಡೆದ ವಿಚಾರಕ್ಕೆ ಪ್ರತಿಕ್ರಿಯಿಸಿ, ಯುಪಿಎ ಅವಧಿಯಲ್ಲಿ ಜಾಗತೀಕರಣ, ಉದಾರೀಕರಣ ಆದ ಮೇಲೆ ಹೊಸ ಕಾಯ್ದೆ ಬಂದಿವೆ. ಯುಪಿಎ ಸರ್ಕಾರದಲ್ಲಿ ಕರಡು ಇತ್ತು. ಎಲ್ಲಾ ರಾಜ್ಯಗಳ ಅಭಿಪ್ರಾಯ ಪಡೆದು ಜಾರಿ ಮಾಡಲಾಗಿತ್ತು. ಪಂಜಾಬ್, ಹರಿಯಾಣದ ರೈತರು ವಿರೋಧ ಮಾಡಿದ್ರು. ಪ್ರಧಾನಿಗಳು ಈಗ ಕಾಯ್ದೆ ವಾಪಸ್ ಪಡೆಯುತ್ತೇವೆ ಅಂತ ಹೇಳಿದ್ದಾರೆ. ಇದು ಸ್ಪಂದನಾಶೀಲ ಸರ್ಕಾರ ಇದು. ಹೀಗಾಗಿ ರೈತರ ಭಾವನೆಗೆ ಬೆಲೆ ಕೊಟ್ಟಿದ್ದೇವೆ. ಇದಕ್ಕೂ ಪಂಚರಾಜ್ಯ ಚುನಾವಣೆಗೂ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ದೇಶದಲ್ಲಿ ನಡೆದ ಉಪ ಚುನಾವಣೆಗಳಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆದ್ದಿದೆ. ಹೀಗಾಗಿ ಚುನಾವಣೆ ದೃಷ್ಟಿಯಿಂದ ಪ್ರಧಾನಿಗಳು ಈ ನಿರ್ಧಾರ ಮಾಡಿಲ್ಲ. ರೈತರಿಗೆ ಕಾಯ್ದೆ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಿಯವರು ಮಾಡಿದರು. ಆದರೆ ಅದು ಹೋರಾಟ ಮಾಡೋರಿಗೆ ಅರ್ಥ ಆಗಿರಲಿಲ್ಲ. ಹೀಗಾಗಿ ವಿಶ್ವಾಸ ಬರಬೇಕು ಅನ್ನೋ ದೃಷ್ಟಿಯಿಂದ ಈ ಕಾಯ್ದೆ ವಾಪಸ್ ಪಡೆದಿದ್ದಾರೆ ಎಂದರು.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…