ಬೆಂಗಳೂರು: ಕೇಂದ್ರದ ವಿರುದ್ಧ ಅನ್ನದಾತನ ಹೋರಾಟದ ಕಿಚ್ಚು, ನೂತನ ಕೃಷಿ ಮಸೂದೆಯ ವಿಚಾರಕ್ಕೆ ದೆಹಲಿಯಂಗಳದಲ್ಲಿ ಈಗ ಹಸಿರು ಹೋರಾಟದ ಕಾವು. ಈಗ ಇದು ಬೆಂಗಳೂರಿನಲ್ಲೂ ಆರಂಭವಾಗಲಿದೆ.
ಅಧಿವೇಶನದ ಬೆನ್ನಲ್ಲೆ ನಾಳೆ ಭಾರತ್ ಬಂದ್ ಪ್ರಯುಕ್ತ ರೈತ ಸಂಘಟನೆಗಳು ಕರ್ನಾಟಕ ಬಂದ್ ಗೂ ಕರೆಕೊಟ್ಟಿದೆ. ಈ ಮಧ್ಯೆ ನಾಳೆಯುಂದ ಕುರುಬೂರು ಶಾಂತಕುಮಾರ್ ಹಾಗೂ ಐಕ್ಯ ಹೋರಾಟ ಸಮಿತಿಯಿಂದ ಮೌರ್ಯ ಸರ್ಕಲ್ ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆಯೂ ನಡೆಯಲಿದೆ. ನಾಳೆ ಸರ್ಕಾರದ ವಿರುದ್ಧ ಹೋರಾಟದ ರಣಕಹಳೆಯನ್ನು ರಾಜ್ಯದಲ್ಲೂ ರೈತರು ಮೊಳಗಿಸಲಿದ್ದಾರೆ.
ಬೆಂಗಳೂರಲ್ಲಿ ಬುಧವಾರ ರೈತರು ಸಿಡಿದೇಳಲಿದ್ದಾರೆ. ರಾಜ್ಯದ ವಿವಿಧ ಮೂಲೆ ಮೂಲೆಗಳಿಂದ ಬೆಂಗಳೂರಿಗೆ ಅನ್ನದಾತರು ಬರಲಿದ್ದಾರೆ. ರಾಜಧಾನಿಗೆ ನಾಳೆಯೇ ಸಾವಿರಾರು ರೈತರು ಬರಲಿದ್ದಾರೆ. ಡಿಸೆಂಬರ್ 9 ರಂದು ಬೆಳಗ್ಗೆ ರೈಲು ಮೂಲಕ ಸಾವಿರಾರು ಮಂದಿ ರೈಲ್ವೆ ನಿಲ್ದಾಣಕ್ಕೆ ಎಂಟ್ರಿ ಕೊಡಲಿದ್ದು, 9 ರಂದು 10 ಸಾವಿರ ರೈತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ.
ಬುಧವಾರ 11 ಗಂಟೆಗೆ ರೈಲ್ವೆ ನಿಲ್ದಾಣದಿಂದ ವಿಧಾನಸೌಧದವರೆಗೂ ಬೃಹತ್ ಪ್ರತಿಭಟನೆ ನಡೆಯಲಿದೆ. ನಂತರ ವಿಧಾನಸೌಧಕ್ಕೆ ಅನ್ನದಾತರು ಮುತ್ತಿಗೆ ಹಾಕಲಿದ್ದಾರೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾಹಿತಿ ನೀಡಿದ್ದಾರೆ.
ಬಂದ್ಗೆ ವಾಟಾಳ್ ನೇತೃತ್ವದ ಕನ್ನಡ ಒಕ್ಕೂಟ, ರೈತ ಹೋರಾಟಗಾರರು, ಎಪಿಎಂಸಿ ಕೂಲಿ ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು, ಅಂಗನವಾಡಿ ನೌಕರರ ಸಂಘ ಹಾಗೂ ಸಿಐಟಿಯು ಅವರು ಬೆಂಬಲ ಕೊಡಲಿದ್ದಾರೆ. ಇನ್ನು ಕರವೇ ಪ್ರವೀಣ್ ಶೆಟ್ಟಿ ಬಣ, ಓಲಾ, ಊಬರ್ ಟ್ಯಾಕ್ಸಿ, ಸಾರಿಗೆ ನೌಕರರ ಸಂಘ, ಹೋಟೆಲ್ ಮಾಲೀಕರ ಸಂಘ, ಕರ್ನಾಟಕ ರಾಜ್ಯ ಟ್ರಾವೆಲ್ ಮಾಲೀಕರ ಸಂಘ ನೈತಿಕ ಬೆಂಬಲ ನೀಡಲಿದೆ. ಆದರೆ ಆಟೋ ಸಂಘಟನೆಗಳು ಮಾತ್ರ ತಟಸ್ಥ ನೀತಿ ತಾಳಿವೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…