ಬೆಂಗಳೂರು: ಕೇಂದ್ರದ ವಿರುದ್ಧ ಅನ್ನದಾತನ ಹೋರಾಟದ ಕಿಚ್ಚು, ನೂತನ ಕೃಷಿ ಮಸೂದೆಯ ವಿಚಾರಕ್ಕೆ ದೆಹಲಿಯಂಗಳದಲ್ಲಿ ಈಗ ಹಸಿರು ಹೋರಾಟದ ಕಾವು. ಈಗ ಇದು ಬೆಂಗಳೂರಿನಲ್ಲೂ ಆರಂಭವಾಗಲಿದೆ.
ಅಧಿವೇಶನದ ಬೆನ್ನಲ್ಲೆ ನಾಳೆ ಭಾರತ್ ಬಂದ್ ಪ್ರಯುಕ್ತ ರೈತ ಸಂಘಟನೆಗಳು ಕರ್ನಾಟಕ ಬಂದ್ ಗೂ ಕರೆಕೊಟ್ಟಿದೆ. ಈ ಮಧ್ಯೆ ನಾಳೆಯುಂದ ಕುರುಬೂರು ಶಾಂತಕುಮಾರ್ ಹಾಗೂ ಐಕ್ಯ ಹೋರಾಟ ಸಮಿತಿಯಿಂದ ಮೌರ್ಯ ಸರ್ಕಲ್ ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆಯೂ ನಡೆಯಲಿದೆ. ನಾಳೆ ಸರ್ಕಾರದ ವಿರುದ್ಧ ಹೋರಾಟದ ರಣಕಹಳೆಯನ್ನು ರಾಜ್ಯದಲ್ಲೂ ರೈತರು ಮೊಳಗಿಸಲಿದ್ದಾರೆ.
ಬೆಂಗಳೂರಲ್ಲಿ ಬುಧವಾರ ರೈತರು ಸಿಡಿದೇಳಲಿದ್ದಾರೆ. ರಾಜ್ಯದ ವಿವಿಧ ಮೂಲೆ ಮೂಲೆಗಳಿಂದ ಬೆಂಗಳೂರಿಗೆ ಅನ್ನದಾತರು ಬರಲಿದ್ದಾರೆ. ರಾಜಧಾನಿಗೆ ನಾಳೆಯೇ ಸಾವಿರಾರು ರೈತರು ಬರಲಿದ್ದಾರೆ. ಡಿಸೆಂಬರ್ 9 ರಂದು ಬೆಳಗ್ಗೆ ರೈಲು ಮೂಲಕ ಸಾವಿರಾರು ಮಂದಿ ರೈಲ್ವೆ ನಿಲ್ದಾಣಕ್ಕೆ ಎಂಟ್ರಿ ಕೊಡಲಿದ್ದು, 9 ರಂದು 10 ಸಾವಿರ ರೈತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ.
ಬುಧವಾರ 11 ಗಂಟೆಗೆ ರೈಲ್ವೆ ನಿಲ್ದಾಣದಿಂದ ವಿಧಾನಸೌಧದವರೆಗೂ ಬೃಹತ್ ಪ್ರತಿಭಟನೆ ನಡೆಯಲಿದೆ. ನಂತರ ವಿಧಾನಸೌಧಕ್ಕೆ ಅನ್ನದಾತರು ಮುತ್ತಿಗೆ ಹಾಕಲಿದ್ದಾರೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾಹಿತಿ ನೀಡಿದ್ದಾರೆ.
ಬಂದ್ಗೆ ವಾಟಾಳ್ ನೇತೃತ್ವದ ಕನ್ನಡ ಒಕ್ಕೂಟ, ರೈತ ಹೋರಾಟಗಾರರು, ಎಪಿಎಂಸಿ ಕೂಲಿ ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು, ಅಂಗನವಾಡಿ ನೌಕರರ ಸಂಘ ಹಾಗೂ ಸಿಐಟಿಯು ಅವರು ಬೆಂಬಲ ಕೊಡಲಿದ್ದಾರೆ. ಇನ್ನು ಕರವೇ ಪ್ರವೀಣ್ ಶೆಟ್ಟಿ ಬಣ, ಓಲಾ, ಊಬರ್ ಟ್ಯಾಕ್ಸಿ, ಸಾರಿಗೆ ನೌಕರರ ಸಂಘ, ಹೋಟೆಲ್ ಮಾಲೀಕರ ಸಂಘ, ಕರ್ನಾಟಕ ರಾಜ್ಯ ಟ್ರಾವೆಲ್ ಮಾಲೀಕರ ಸಂಘ ನೈತಿಕ ಬೆಂಬಲ ನೀಡಲಿದೆ. ಆದರೆ ಆಟೋ ಸಂಘಟನೆಗಳು ಮಾತ್ರ ತಟಸ್ಥ ನೀತಿ ತಾಳಿವೆ.
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…
ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…