Featured

ಕೃಷಿ ಕಾಯ್ದೆ ವಿರೋಧಿಸಿ ನಾಳೆ ಭಾರತ್ ಬಂದ್ -Vishwanews24

ಕೃಷಿ ಕಾಯ್ದೆ ವಿರೋಧಿಸಿ ನಾಳೆ ಭಾರತ್ ಬಂದ್ -Vishwanews24

ಬೆಂಗಳೂರು: ಕೇಂದ್ರದ ವಿರುದ್ಧ ಅನ್ನದಾತನ ಹೋರಾಟದ ಕಿಚ್ಚು, ನೂತನ ಕೃಷಿ ಮಸೂದೆಯ ವಿಚಾರಕ್ಕೆ ದೆಹಲಿಯಂಗಳದಲ್ಲಿ ಈಗ ಹಸಿರು ಹೋರಾಟದ ಕಾವು. ಈಗ ಇದು ಬೆಂಗಳೂರಿನಲ್ಲೂ ಆರಂಭವಾಗಲಿದೆ.

ಅಧಿವೇಶನದ ಬೆನ್ನಲ್ಲೆ ನಾಳೆ ಭಾರತ್ ಬಂದ್ ಪ್ರಯುಕ್ತ ರೈತ ಸಂಘಟನೆಗಳು ಕರ್ನಾಟಕ ಬಂದ್ ಗೂ ಕರೆಕೊಟ್ಟಿದೆ. ಈ ಮಧ್ಯೆ ನಾಳೆಯುಂದ ಕುರುಬೂರು ಶಾಂತಕುಮಾರ್ ಹಾಗೂ ಐಕ್ಯ ಹೋರಾಟ ಸಮಿತಿಯಿಂದ ಮೌರ್ಯ ಸರ್ಕಲ್ ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆಯೂ ನಡೆಯಲಿದೆ. ನಾಳೆ ಸರ್ಕಾರದ ವಿರುದ್ಧ ಹೋರಾಟದ ರಣಕಹಳೆಯನ್ನು ರಾಜ್ಯದಲ್ಲೂ ರೈತರು ಮೊಳಗಿಸಲಿದ್ದಾರೆ.

ಬೆಂಗಳೂರಲ್ಲಿ ಬುಧವಾರ ರೈತರು ಸಿಡಿದೇಳಲಿದ್ದಾರೆ. ರಾಜ್ಯದ ವಿವಿಧ ಮೂಲೆ ಮೂಲೆಗಳಿಂದ ಬೆಂಗಳೂರಿಗೆ ಅನ್ನದಾತರು ಬರಲಿದ್ದಾರೆ. ರಾಜಧಾನಿಗೆ ನಾಳೆಯೇ ಸಾವಿರಾರು ರೈತರು ಬರಲಿದ್ದಾರೆ. ಡಿಸೆಂಬರ್ 9 ರಂದು ಬೆಳಗ್ಗೆ ರೈಲು ಮೂಲಕ ಸಾವಿರಾರು ಮಂದಿ ರೈಲ್ವೆ ನಿಲ್ದಾಣಕ್ಕೆ ಎಂಟ್ರಿ ಕೊಡಲಿದ್ದು, 9 ರಂದು 10 ಸಾವಿರ ರೈತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ.

ಬುಧವಾರ 11 ಗಂಟೆಗೆ ರೈಲ್ವೆ ನಿಲ್ದಾಣದಿಂದ ವಿಧಾನಸೌಧದವರೆಗೂ ಬೃಹತ್ ಪ್ರತಿಭಟನೆ ನಡೆಯಲಿದೆ. ನಂತರ ವಿಧಾನಸೌಧಕ್ಕೆ ಅನ್ನದಾತರು ಮುತ್ತಿಗೆ ಹಾಕಲಿದ್ದಾರೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್  ಮಾಹಿತಿ ನೀಡಿದ್ದಾರೆ.

ಬಂದ್‍ಗೆ ವಾಟಾಳ್ ನೇತೃತ್ವದ ಕನ್ನಡ ಒಕ್ಕೂಟ, ರೈತ ಹೋರಾಟಗಾರರು, ಎಪಿಎಂಸಿ ಕೂಲಿ ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು, ಅಂಗನವಾಡಿ ನೌಕರರ ಸಂಘ ಹಾಗೂ ಸಿಐಟಿಯು ಅವರು ಬೆಂಬಲ ಕೊಡಲಿದ್ದಾರೆ. ಇನ್ನು ಕರವೇ ಪ್ರವೀಣ್ ಶೆಟ್ಟಿ ಬಣ, ಓಲಾ, ಊಬರ್ ಟ್ಯಾಕ್ಸಿ, ಸಾರಿಗೆ ನೌಕರರ ಸಂಘ, ಹೋಟೆಲ್ ಮಾಲೀಕರ ಸಂಘ, ಕರ್ನಾಟಕ ರಾಜ್ಯ ಟ್ರಾವೆಲ್ ಮಾಲೀಕರ ಸಂಘ ನೈತಿಕ ಬೆಂಬಲ ನೀಡಲಿದೆ. ಆದರೆ ಆಟೋ ಸಂಘಟನೆಗಳು ಮಾತ್ರ ತಟಸ್ಥ ನೀತಿ ತಾಳಿವೆ.

 

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

12 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

12 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

12 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

13 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

13 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

14 hours ago