ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ನಗರದಲ್ಲಿ ಮಂಗಳವಾರ (ಜು.7) ವಿವಿಧ ಸಂಘಟನೆ ಹಾಗೂ ರೈತರಿಂದ ಮನವಿ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬರ ಪರಿಸ್ಥಿತಿ ಸರ್ಕಾರದ ಗಮನಕ್ಕಿದೆ. ಹೀಗಾಗಿ ಯಾವ ಸಾಲ ಮನ್ನಾ ಮಾಡಬೇಕು ಹಾಗೂ ಹೇಗೆ ಮಾಡಬೇಕೆಂಬುದನ್ನು ಪರಾಮರ್ಶಿಸಲಾಗುವುದು ಎಂದರು.
ರಾಜ್ಯದ ಬರ ಪರಿಸ್ಥಿತಿ ಅರಿಯಲು ಪ್ರವಾಸ ಕೈಗೊಳ್ಳಲಾಗಿದೆ. ಈಗ ಬೆಳಗಾವಿಗೆ ತೆರಳಿ ಅಲ್ಲೂ ಕೂಡಾ ವಾಸ್ತವ ಅರಿಯಲಾಗುವುದು. ಪ್ರವಾಸದ ನಂತರ ಸಂಬಂಧ ಪಟ್ಟವರೊಂದಿಗೆ ಸಮಾಲೋಚನೆ ನಡೆಸಲಾಗುವುದು. ಅಂದರೆ ಯಾವ ರೀತಿ, ಯಾವ ಸಾಲ ಮನ್ನಾ ಎಂಬುದನ್ನು ಸಮಗ್ರವಾಗಿ ಅವಲೋಕಿಸಿ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ತಿಳಿಸಿದರು.
ಸಾರ್ವಜನಿಕರ, ರೈತರ ಸಮಸ್ಯೆ ಅರಿಯಲು ಪ್ರಜಾಸೇವೆ ರಚಿಸಲಾಗಿದ್ದು, ಶೀಘ್ರ ಸಚಿವರನ್ನು ನೇಮಕ ಮಾಡಲಾಗುವುದು. ಅದರಡಿಯೇ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗುತ್ತದೆ ಎಂದು ಸಿಎಂ ಡಿ ಕೆ ಶಿವಕುಮಾರ ಪುನರುಚ್ಚರಿಸಿದರು.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]