Featured

ಕೃಷ್ಣನಗರಿಯಲ್ಲಿ ಸರಳ ಶ್ರೀಕೃಷ್ಣ ಜನ್ಮಾಷ್ಟಮಿ : ಚಿನ್ನದ ತೊಟ್ಟಿಲಿನಲ್ಲಿ ಶ್ರೀ ಕೃಷ್ಣನ ದರ್ಶನ -Vishwanews24

ಕೃಷ್ಣನಗರಿಯಲ್ಲಿ ಸರಳ ಶ್ರೀಕೃಷ್ಣ ಜನ್ಮಾಷ್ಟಮಿ : ಚಿನ್ನದ ತೊಟ್ಟಿಲಿನಲ್ಲಿ ಕುಳಿತ ಶ್ರೀ ಕೃಷ್ಣನ ದರ್ಶನ -Vishwanews24

ಉಡುಪಿ: ಕೃಷ್ಣನೂರು ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಜೋರಾಗಿದೆ. ಉಡುಪಿ ಕೃಷ್ಣಮಠದಲ್ಲಿ ಸೌರಮಾನ ಪಂಚಾಂಗವನ್ನು ಆಧರಿಸಿ ಎಲ್ಲಾ ಧಾರ್ಮಿಕ ಆಚರಣೆಗಳು ನಡೆಯುತ್ತವೆ.

ದೇಶಾದ್ಯಂತ ಚಾಂದ್ರಮಾನ ಪಂಚಾಂಗದ ಪ್ರಕಾರ ಶ್ರೀಕೃಷ್ಣಜನ್ಮಾಷ್ಟಮಿ ಕಳೆದ ತಿಂಗಳೇ ನಡೆದಿದೆ. ಇಂದು ನಾಳೆ ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತಿದೆ. ಕೊರೊನಾ ಇರುವುದರಿಂದ ಶ್ರೀಕೃಷ್ಣಮಠದ ಸಿಬ್ಬಂದಿಗಳು ಮತ್ತು ಸ್ವಾಮೀಜಿಗಳು ಮಾತ್ರ ಸಾಂಪ್ರದಾಯಿಕ ಆಚರಣೆಯನ್ನು ನಡೆಸಿದ್ದಾರೆ. ಅಷ್ಟಮಿಯ ಹಿನ್ನೆಲೆಯಲ್ಲಿ ಕಡೆಗೋಲು ಕೃಷ್ಣನಿಗೆ ಲಕ್ಷ ತುಳಸಿ ಅರ್ಚನೆಯನ್ನು ಪರ್ಯಾಯ ಅದಮಾರು ಮಠಾಧೀಶ ಈಶಪ್ರಿಯ ತೀರ್ಥ ಶ್ರೀಪಾದರು ನೆರವೇರಿಸಿದರು.

ಕಾಣಿಯೂರು ಮಠಾಧೀಶ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಬಾಲಗೋಪಾಲನ ಅಲಂಕಾರ ಮಾಡಿದರು. ನಿಂತ ಭಂಗಿಯಲ್ಲಿರುವ ಉಡುಪಿ ಶ್ರೀಕೃಷ್ಣ ಇಂದು ಚಿನ್ನದ ತೊಟ್ಟಿಲಿನಲ್ಲಿ ಕುಳಿತ ಕೃಷ್ಣನಾಗಿ ದರ್ಶನ ಕೊಡುತ್ತಿದ್ದಾನೆ. ಅಲಂಕಾರದ ನಂತರ ಪರ್ಯಾಯ ಸ್ವಾಮೀಜಿಯವರು ಮಹಾಪೂಜೆಯನ್ನು ನೆರವೇರಿಸಿದರು. ಸ್ವಾಮೀಜಿಗಳು ಮತ್ತು ಸಿಬ್ಬಂದಿಗಳು ದಿನಪೂರ್ತಿ ಉಪವಾಸವಿದ್ದು, ರಾತ್ರಿ 12.16ಕ್ಕೆ ಅರ್ಘ್ಯ ಪ್ರದಾನ ಮಾಡುವ ಮೂಲಕ ಉಪವಾಸವನ್ನು ತೊರೆಯಲಿದ್ದಾರೆ.

ನಾಳೆ ವಿಟ್ಲಪಿಂಡಿ ಮಹೋತ್ಸವ ಮೂಲಕ ಸಂಭ್ರಮ ಮತ್ತು ಕಾರ್ಯಕ್ರಮಗಳು ನಡೆಯಲಿದೆ. ಸಾರ್ವಜನಿಕರು ಈ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ನಿರ್ಬಂಧ ಹೇರಲಾಗಿದೆ. ಹೀಗಾಗಿ ಕೃಷ್ಣಮಠದ ಸಿಬ್ಬಂದಿಗಳು ಮತ್ತು ಗೋಶಾಲೆಯ ಗೊಲ್ಲ ಸಮುದಾಯದವರು ಅಷ್ಟಮಿ ಮತ್ತು ವಿಟ್ಲಪಿಂಡಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

10 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago