Featured

ಕೃಷ್ಣನೂರು ಉಡುಪಿಯಲ್ಲಿ ನಾಡಹಬ್ಬ ಶ್ರೀಕೃಷ್ಣ ಜನ್ಮಾಷ್ಟಮಿಗೆ ಸಂಭ್ರಮದ ಸಿದ್ಧತೆ -Vishwanews24

ಉಡುಪಿ:ಶ್ರೀಕೃಷ್ಣ ಜನ್ಮಭೂಮಿ ಮಥುರಾ ಸೇರಿದಂತೆ ದೇಶದೆಲ್ಲೆಡೆ ಆಗಸ್ಟ್‌ 23ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ. ರಾಜ್ಯದಲ್ಲಿ ಶ್ರೀಕೃಷ್ಣನ ಪ್ರಮುಖ ಸನ್ನಿಧಾನ ಉಡುಪಿ ಶ್ರೀಕೃಷ್ಣ ಮಠದಲ್ಲಿ ಸಿದ್ಧತೆ ಭರದಿಂದ ಸಾಗಿದೆ.

ರಾಜ್ಯದ ವಿವಿಧ ಭಾಗದಿಂದ ಶ್ರೀಕೃಷ್ಣಾಷ್ಟಮಿ ಉತ್ಸವಕ್ಕೆ ಲಕ್ಷಾಂತರ ಜನ ಆಗಮಿಸುತ್ತಾರೆ. 23ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು 24ರಂದು ವಿಟ್ಲಪಿಂಡಿ ಉತ್ಸವ ನಡೆಯಲಿದ್ದು, ಇದರ ಅಂಗವಾಗಿ ನಡೆಯುವ ಧಾರ್ಮಿಕ ಮತ್ತು ಸಾಂಸ್ಕೃತಿ ಕಾರ್ಯಕ್ರಮಗಳಿಗೆ ಭಾನುವಾರ ಚಾಲನೆ ನೀಡಲಾಗಿತ್ತು.

ಆ.23ರಂದು ರಾತ್ರಿ 12.12ಕ್ಕೆ ಶ್ರೀಕೃಷ್ಣನಿಗೆ ಅಘ್ರ್ಯಪ್ರದಾನ, 24ರಂದು ಮಧ್ಯಾಹ್ನ 3ಗಂಟೆಗೆ ರಥಬೀದಿಯಲ್ಲಿ ವಿಟ್ಲಪಿಂಡಿ (ಶ್ರೀಕೃಷ್ಣ ಲೀಲೋತ್ಸವ) ನಡೆಯಲಿದ್ದು ಪೂರ್ವ ಸಿದ್ಧತೆ ಭರದಿಂದ ಸಾಗಿದೆ. 35ಕ್ಕೂ ಅಧಿಕ ಹುಲಿ ವೇಷ ತಂಡಗಳು ಶ್ರೀಕೃಷ್ಣ ಲೀಲೋತ್ಸವದಲ್ಲಿ ಪಾಲ್ಗೊಂಡು ಮೆರುಗು ನೀಡಲಿವೆ. ಅಂದು ಮೊಸರು ಕುಡಿಕೆ ಉತ್ಸವವೂ ನಡೆಯಲಿದೆ.

ಅಷ್ಟಮಿಯಂದು ಕೃಷ್ಣ ದೇವರಿಗೆ ಸಮರ್ಪಿಸಲು ಮಡಿಯಲ್ಲಿ ತಯಾರಿಸುವ ಲಡ್ಡಿಗೆ ಮುಹೂರ್ತ 23ರಂದು ಬೆಳಗ್ಗೆ 9.30ಕ್ಕೆ ಭೋಜನ ಶಾಲೆಯಲ್ಲಿ ನಡೆಯಲಿದೆ. ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಚಾಲನೆ ನೀಡಲಿದ್ದಾರೆ.

ಶ್ರೀಕೃಷ್ಣಮಠದೊಳಗೆ ಹೂವಿನ ಅಲಂಕಾರ, ವಿದ್ವಾಂಸರಿಂದ ಭಾಗವತ, ವೇದ, ಸರ್ವಮೂಲ ಪಾರಾಯಣ ನಡೆಯಲಿದೆ. ಮಧ್ಯರಾತ್ರಿಯ ಚಂದ್ರೋದಯದಲ್ಲಿ ವಿಶೇಷಪೂಜೆ, ಉಂಡೆ, ಚಕ್ಕುಲಿ ಸಹಿತ ಶ್ರೀಕೃಷ್ಣನಿಗೆ ನೈವೇದ್ಯಅರ್ಪಿಸಿದ ನಂತರ ಪರ್ಯಾಯ ಪಲಿಮಾರು ಶ್ರೀ ವಿದ್ಯಾಧಿಧೀಶತೀರ್ಥ ಶ್ರೀಪಾದರಿಂದ ಅಘ್ರ್ಯಪ್ರದಾನ. ಬಳಿಕ ಅಘ್ರ್ಯ ನಮನ ಸಲ್ಲಿಸಲು ಭಕ್ತರಿಗೆ ಅವಕಾಶ.

ಶ್ರೀ ಕೃಷ್ಣಮಠದಿಂದ ಭಕ್ತರಿಗೆ ಹಾಗೂ ಚಿಣ್ಣರ ಸಂತರ್ಪಣೆಯ ಶಾಲಾ ಮಕ್ಕಳಿಗೆ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ದಲ್ಲಿ ಉಂಡೆ, ಚಕ್ಕುಲಿ ಪ್ರಸಾದವನ್ನು ವಿಶೇಷವಾಗಿ ಕಳುಹಿಸಿಕೊಡಲಾಗುತ್ತದೆ. ಅದಕ್ಕಾಗಿ 1.5 ಲಕ್ಷ ಚಕ್ಕುಲಿ ಹಾಗೂ 1 ಲಕ್ಷ ಉಂಡೆಗಳನ್ನು ತಯಾರಿಸಲಾಗುತ್ತಿದೆ. ಮಂಗಳವಾರ ಬೆಳಗ್ಗೆ ಅನ್ನಬ್ರಹ್ಮ ಹಾಗೂ ಮಧ್ವಾಂಗಣದಲ್ಲಿ ನೂರಕ್ಕೂ ಹೆಚ್ಚು ಬಾಣಸಿಗರು ಚಕ್ಕುಲಿ, ಗುಂಡಿಟ್ಟು ಲಾಡು, ಅರಳುಂಡೆ, ನೆಲಕಡ್ಲೆ ಲಾಡು, ಹೆಸರಿಟ್ಟು ಲಾಡು, ಕಡ್ಲೆ ಹಾಗೂ ಎಳ್ಳು ಉಂಡೆ, ಶುಂಠಿ, ಗೋಡಂಬಿ ಲಾಡು ತಯಾರಿಸಲಿದ್ದಾರೆ.

ವಿಟ್ಲಪಿಂಡಿ ಉತ್ಸವದಲ್ಲಿ ಮೊಸರು ಕುಡಿಕೆ ಹೊಡೆಯಲು ರಥಬೀದಿಯಲ್ಲಿ ಗುರ್ಜಿಗಳನ್ನು ನಿಲ್ಲಿಸಲಾಗುತ್ತಿದೆ. 13 ಮರದ ತ್ರಿಕೋನಾಕೃತಿಯ ಗುರ್ಜಿಗಳನ್ನು ನಿರ್ಮಿಸಿ ಮೊಸರು ಕುಡಿಕೆಗೆ ಸಿದ್ಧತೆ ನಡೆಸಲಾಗುತ್ತಿದೆ. ಶ್ರೀ ಕೃಷ್ಣಮಠದಲ್ಲಿ ಗೋವುಗಳನ್ನು ನೋಡಿಕೊಳ್ಳುವ ಗೋವಳರು ಮೊಸರುಕುಡಿಕೆ ಒಡೆಯುವ ಕಾಯಕ ನಿರ್ವಹಿಸುತ್ತಾರೆ. ರಥಬೀದಿ ತೆಂಕ ಪೇಟೆ ಮತ್ತು ಕನಕ ಗೋಪುರದ ಕೆಳಗೆ ಬೃಹತ್ ಮಂಟಪದ ಗುರ್ಜಿ ನಿರ್ಮಿಸಲಾಗಿದೆ.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago