ಉಡುಪಿ

ಕೃಷ್ಣನ ಜನ್ಮಸ್ಥಾನದಲ್ಲಿರುವ ಔರಂಗಜೇಬನ ಮಸೀದಿ ಹಾಗೂ ಕಾಶಿ ವಿಶ್ವನಾಥನ ಜ್ಯೋತಿರ್ಲಿಂಗದಲ್ಲಿರುವ ಮಸೀದಿ ಎರಡೂ ಹೋಗಬೇಕಾಗಿದೆ: ಗೋ ಮಧುಸೂದನ್ ಉಡುಪಿಯಲ್ಲಿ ಹೇಳಿಕೆ.

ಉಡುಪಿ: ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಶ್ರೀರಾಮನ ಭವ್ಯ ಮಂದಿರ ನಿರ್ಮಾಣಕ್ಕೆ ಎಲ್ಲಾಸಿದ್ಧತೆಗಳು ನಡೆಯುತ್ತಿವೆ. ಇನ್ನು ನಮ್ಮ ಮುಂದಿನ ಗುರಿ ಮಥುರಾದಕೃಷ್ಣ ಹಾಗೂ ಕಾಶಿಯ ವಿಶ್ವನಾಥನ ಬಿಡುಗಡೆಯಾಗಿದೆ ಎಂದು ಗೋ ಮಧುಸೂದನ್ ಉಡುಪಿಯಲ್ಲಿ ಹೇಳಿದ್ದಾರೆ.

ಪರ್ಯಾಯ ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರ ಎರಡನೇ ಪರ್ಯಾಯದ ಮಹತ್ವಾಕಾಂಕ್ಷಿ ಯೋಜನೆಯಾದ ಉಡುಪಿ ಶ್ರೀಕೃಷ್ಣ ಮಠದ ಗರ್ಭಗುಡಿಗೆ ಚಿನ್ನದ ತಗಡುಹೊದಿಸುವ ಕಾರ್ಯಕ್ಕೆ ಇಂದು ರಾಜಾಂಗಣದಲ್ಲಿ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡುತಿದ್ದರು. ಹಿಂದುಗಳ ಬಹುಕಾಲದ ನಿರೀಕ್ಷೆಯಾದ ಅಯೋಧ್ಯೆಯಲ್ಲಿ ರಾಮನಿಗೆ ಭವ್ಯ ಮಂದಿರ ಕಟ್ಟಲು ಎಲ್ಲಾ ವ್ಯವಸ್ಥೆ ಪೂರ್ಣಗೊಳ್ಳುವಕಾಲಘಟ್ಟದಲ್ಲಿ ನಾವಿದ್ದೇವೆ ಎಂದರು.

ರಾಮಜನ್ಮಭೂಮಿಗೆ ಈಗಾಗಲೇ ಮುಕ್ತಿ ಸಿಕ್ಕಿದೆ. ದೇಶದ ಸಾಧು-ಸಂತರು,ಜನಸಾಮಾನ್ಯರು ಅಲ್ಲಿ ಮಂದಿರ ನಿರ್ಮಾಣದ ಸಂಕಲ್ಪತೊಟ್ಟಿದ್ದಾರೆ. ಇದಕ್ಕೆ ಅವಕಾಶ ಮಾಡಿಕೊಡುವಂತೆ ಪ್ರಧಾನಿಗೆ ಮನವಿ ಮಾಡಲಾಗಿದೆ. `ಮೊದಲುರಾಮಮಂದಿರ, ಬಳಿಕ ಚುನಾವಣೆ’ ಎಂದು ಸ್ಪಷ್ಟವಾಗಿತಿಳಿಸಲಾಗಿದೆ ಎಂದು ಗೋ ಮಧುಸೂದನ ತಿಳಿಸಿದರು.

ಮುಂದೆ ನಾವು ಕೃಷ್ಣನ ಜನ್ಮಸ್ಥಾನಕ್ಕೆ ಹಾಗೂಕಾಶಿಗೆ ಜೈ ಕೂಗುತ್ತೇವೆ. ಈ ಮೂರು ದೇವಸ್ಥಾನಗಳು ನಮಗೆ ಬೇಕೇಬೇಕು. ರಾಮ-ಕೃಷ್ಣರು ನಮಗೆ ಕೇವಲರಾಜರಲ್ಲ, ದೇವರು, ಭಗವಂತ, ಸೃಷ್ಟಿಕರ್ತ. ಅವರುನಮ್ಮ ಹೃದಯದಲ್ಲಿ ನೆಲೆಸಿದ್ದಾರೆ ಎಂದರು.ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸುವ ಜೊತೆ ಜೊತೆಗೆಶ್ರೀಕೃಷ್ಣ ಹಾಗೂ ಕಾಶಿ ವಿಶ್ವನಾಥರ ಬಿಡುಗಡೆ ನಮ್ಮಮುಂದಿನ ಗುರಿ. ಕೃಷ್ಣನ ಜನ್ಮಸ್ಥಾನದಲ್ಲಿರುವ ಔರಂಗಜೇಬನ ಮಸೀದಿ ಹಾಗೂ ಕಾಶಿ ವಿಶ್ವನಾಥನ ಜ್ಯೋತಿರ್ಲಿಂಗದಲ್ಲಿರುವ ಮಸೀದಿ ಎರಡೂ ಹೋಗಬೇಕಾಗಿದೆ ಎಂದು ಹೇಳಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago