ಉಡುಪಿ

ಕೃಷ್ಣನ ಜನ್ಮಸ್ಥಾನದಲ್ಲಿರುವ ಔರಂಗಜೇಬನ ಮಸೀದಿ ಹಾಗೂ ಕಾಶಿ ವಿಶ್ವನಾಥನ ಜ್ಯೋತಿರ್ಲಿಂಗದಲ್ಲಿರುವ ಮಸೀದಿ ಎರಡೂ ಹೋಗಬೇಕಾಗಿದೆ: ಗೋ ಮಧುಸೂದನ್ ಉಡುಪಿಯಲ್ಲಿ ಹೇಳಿಕೆ.

ಉಡುಪಿ: ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಶ್ರೀರಾಮನ ಭವ್ಯ ಮಂದಿರ ನಿರ್ಮಾಣಕ್ಕೆ ಎಲ್ಲಾಸಿದ್ಧತೆಗಳು ನಡೆಯುತ್ತಿವೆ. ಇನ್ನು ನಮ್ಮ ಮುಂದಿನ ಗುರಿ ಮಥುರಾದಕೃಷ್ಣ ಹಾಗೂ ಕಾಶಿಯ ವಿಶ್ವನಾಥನ ಬಿಡುಗಡೆಯಾಗಿದೆ ಎಂದು ಗೋ ಮಧುಸೂದನ್ ಉಡುಪಿಯಲ್ಲಿ ಹೇಳಿದ್ದಾರೆ.

ಪರ್ಯಾಯ ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರ ಎರಡನೇ ಪರ್ಯಾಯದ ಮಹತ್ವಾಕಾಂಕ್ಷಿ ಯೋಜನೆಯಾದ ಉಡುಪಿ ಶ್ರೀಕೃಷ್ಣ ಮಠದ ಗರ್ಭಗುಡಿಗೆ ಚಿನ್ನದ ತಗಡುಹೊದಿಸುವ ಕಾರ್ಯಕ್ಕೆ ಇಂದು ರಾಜಾಂಗಣದಲ್ಲಿ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡುತಿದ್ದರು. ಹಿಂದುಗಳ ಬಹುಕಾಲದ ನಿರೀಕ್ಷೆಯಾದ ಅಯೋಧ್ಯೆಯಲ್ಲಿ ರಾಮನಿಗೆ ಭವ್ಯ ಮಂದಿರ ಕಟ್ಟಲು ಎಲ್ಲಾ ವ್ಯವಸ್ಥೆ ಪೂರ್ಣಗೊಳ್ಳುವಕಾಲಘಟ್ಟದಲ್ಲಿ ನಾವಿದ್ದೇವೆ ಎಂದರು.

ರಾಮಜನ್ಮಭೂಮಿಗೆ ಈಗಾಗಲೇ ಮುಕ್ತಿ ಸಿಕ್ಕಿದೆ. ದೇಶದ ಸಾಧು-ಸಂತರು,ಜನಸಾಮಾನ್ಯರು ಅಲ್ಲಿ ಮಂದಿರ ನಿರ್ಮಾಣದ ಸಂಕಲ್ಪತೊಟ್ಟಿದ್ದಾರೆ. ಇದಕ್ಕೆ ಅವಕಾಶ ಮಾಡಿಕೊಡುವಂತೆ ಪ್ರಧಾನಿಗೆ ಮನವಿ ಮಾಡಲಾಗಿದೆ. `ಮೊದಲುರಾಮಮಂದಿರ, ಬಳಿಕ ಚುನಾವಣೆ’ ಎಂದು ಸ್ಪಷ್ಟವಾಗಿತಿಳಿಸಲಾಗಿದೆ ಎಂದು ಗೋ ಮಧುಸೂದನ ತಿಳಿಸಿದರು.

ಮುಂದೆ ನಾವು ಕೃಷ್ಣನ ಜನ್ಮಸ್ಥಾನಕ್ಕೆ ಹಾಗೂಕಾಶಿಗೆ ಜೈ ಕೂಗುತ್ತೇವೆ. ಈ ಮೂರು ದೇವಸ್ಥಾನಗಳು ನಮಗೆ ಬೇಕೇಬೇಕು. ರಾಮ-ಕೃಷ್ಣರು ನಮಗೆ ಕೇವಲರಾಜರಲ್ಲ, ದೇವರು, ಭಗವಂತ, ಸೃಷ್ಟಿಕರ್ತ. ಅವರುನಮ್ಮ ಹೃದಯದಲ್ಲಿ ನೆಲೆಸಿದ್ದಾರೆ ಎಂದರು.ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸುವ ಜೊತೆ ಜೊತೆಗೆಶ್ರೀಕೃಷ್ಣ ಹಾಗೂ ಕಾಶಿ ವಿಶ್ವನಾಥರ ಬಿಡುಗಡೆ ನಮ್ಮಮುಂದಿನ ಗುರಿ. ಕೃಷ್ಣನ ಜನ್ಮಸ್ಥಾನದಲ್ಲಿರುವ ಔರಂಗಜೇಬನ ಮಸೀದಿ ಹಾಗೂ ಕಾಶಿ ವಿಶ್ವನಾಥನ ಜ್ಯೋತಿರ್ಲಿಂಗದಲ್ಲಿರುವ ಮಸೀದಿ ಎರಡೂ ಹೋಗಬೇಕಾಗಿದೆ ಎಂದು ಹೇಳಿದ್ದಾರೆ.

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

13 minutes ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

23 minutes ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

41 minutes ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

46 minutes ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

53 minutes ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

1 hour ago