ಉಡುಪಿ: ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಶ್ರೀರಾಮನ ಭವ್ಯ ಮಂದಿರ ನಿರ್ಮಾಣಕ್ಕೆ ಎಲ್ಲಾಸಿದ್ಧತೆಗಳು ನಡೆಯುತ್ತಿವೆ. ಇನ್ನು ನಮ್ಮ ಮುಂದಿನ ಗುರಿ ಮಥುರಾದಕೃಷ್ಣ ಹಾಗೂ ಕಾಶಿಯ ವಿಶ್ವನಾಥನ ಬಿಡುಗಡೆಯಾಗಿದೆ ಎಂದು ಗೋ ಮಧುಸೂದನ್ ಉಡುಪಿಯಲ್ಲಿ ಹೇಳಿದ್ದಾರೆ.
ಪರ್ಯಾಯ ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರ ಎರಡನೇ ಪರ್ಯಾಯದ ಮಹತ್ವಾಕಾಂಕ್ಷಿ ಯೋಜನೆಯಾದ ಉಡುಪಿ ಶ್ರೀಕೃಷ್ಣ ಮಠದ ಗರ್ಭಗುಡಿಗೆ ಚಿನ್ನದ ತಗಡುಹೊದಿಸುವ ಕಾರ್ಯಕ್ಕೆ ಇಂದು ರಾಜಾಂಗಣದಲ್ಲಿ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡುತಿದ್ದರು. ಹಿಂದುಗಳ ಬಹುಕಾಲದ ನಿರೀಕ್ಷೆಯಾದ ಅಯೋಧ್ಯೆಯಲ್ಲಿ ರಾಮನಿಗೆ ಭವ್ಯ ಮಂದಿರ ಕಟ್ಟಲು ಎಲ್ಲಾ ವ್ಯವಸ್ಥೆ ಪೂರ್ಣಗೊಳ್ಳುವಕಾಲಘಟ್ಟದಲ್ಲಿ ನಾವಿದ್ದೇವೆ ಎಂದರು.
ರಾಮಜನ್ಮಭೂಮಿಗೆ ಈಗಾಗಲೇ ಮುಕ್ತಿ ಸಿಕ್ಕಿದೆ. ದೇಶದ ಸಾಧು-ಸಂತರು,ಜನಸಾಮಾನ್ಯರು ಅಲ್ಲಿ ಮಂದಿರ ನಿರ್ಮಾಣದ ಸಂಕಲ್ಪತೊಟ್ಟಿದ್ದಾರೆ. ಇದಕ್ಕೆ ಅವಕಾಶ ಮಾಡಿಕೊಡುವಂತೆ ಪ್ರಧಾನಿಗೆ ಮನವಿ ಮಾಡಲಾಗಿದೆ. `ಮೊದಲುರಾಮಮಂದಿರ, ಬಳಿಕ ಚುನಾವಣೆ’ ಎಂದು ಸ್ಪಷ್ಟವಾಗಿತಿಳಿಸಲಾಗಿದೆ ಎಂದು ಗೋ ಮಧುಸೂದನ ತಿಳಿಸಿದರು.
ಮುಂದೆ ನಾವು ಕೃಷ್ಣನ ಜನ್ಮಸ್ಥಾನಕ್ಕೆ ಹಾಗೂಕಾಶಿಗೆ ಜೈ ಕೂಗುತ್ತೇವೆ. ಈ ಮೂರು ದೇವಸ್ಥಾನಗಳು ನಮಗೆ ಬೇಕೇಬೇಕು. ರಾಮ-ಕೃಷ್ಣರು ನಮಗೆ ಕೇವಲರಾಜರಲ್ಲ, ದೇವರು, ಭಗವಂತ, ಸೃಷ್ಟಿಕರ್ತ. ಅವರುನಮ್ಮ ಹೃದಯದಲ್ಲಿ ನೆಲೆಸಿದ್ದಾರೆ ಎಂದರು.ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸುವ ಜೊತೆ ಜೊತೆಗೆಶ್ರೀಕೃಷ್ಣ ಹಾಗೂ ಕಾಶಿ ವಿಶ್ವನಾಥರ ಬಿಡುಗಡೆ ನಮ್ಮಮುಂದಿನ ಗುರಿ. ಕೃಷ್ಣನ ಜನ್ಮಸ್ಥಾನದಲ್ಲಿರುವ ಔರಂಗಜೇಬನ ಮಸೀದಿ ಹಾಗೂ ಕಾಶಿ ವಿಶ್ವನಾಥನ ಜ್ಯೋತಿರ್ಲಿಂಗದಲ್ಲಿರುವ ಮಸೀದಿ ಎರಡೂ ಹೋಗಬೇಕಾಗಿದೆ ಎಂದು ಹೇಳಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…