Featured

ಕೃಷ್ಣ ಜನ್ಮಭೂಮಿ ವಿವಾದ: ಮಥುರಾದಲ್ಲಿನ ಶಹಿ ಈದ್ಗಾ ಮಸೀದಿಯಲ್ಲಿ ಸಮೀಕ್ಷೆ ನಡೆಸಲು ಅಲಹಾಬಾದ್ ಹೈಕೋರ್ಟ್ ಸಮ್ಮತಿ – vishwanews24

ಕೃಷ್ಣ ಜನ್ಮಭೂಮಿ ವಿವಾದ: ಮಥುರಾದಲ್ಲಿನ ಶಹಿ ಈದ್ಗಾ ಮಸೀದಿಯಲ್ಲಿ ಸಮೀಕ್ಷೆ ನಡೆಸಲು ಅಲಹಾಬಾದ್ ಹೈಕೋರ್ಟ್ ಸಮ್ಮತಿ

ಪ್ರಯಾಗರಾಜ್ : ಉತ್ತರ ಪ್ರದೇಶದ ಮಥುರಾದಲ್ಲಿನ ಶಹಿ ಈದ್ಗಾ ಮಸೀದಿಯಲ್ಲಿ ಸಮೀಕ್ಷೆ ನಡೆಸಲು ಅಲಹಾಬಾದ್ ಹೈಕೋರ್ಟ್ ಗುರುವಾರ ಗ್ನೀನ್ ಸಿಗ್ನಲ್ ನೀಡಿದೆ. ಈ ಮೂಲಕ ಬಹು ವರ್ಷದ ಹಿಂದೂಗಳ ಹೋರಾಟಕ್ಕೆ ಜಯ ಸಿಕ್ಕಿದೆ. ನ್ಯಾ.ಮಯಾಂಕ್‌ ಕುಮಾರ್‌ ಜೈನ್‌ ಮಹತ್ವದ ಆದೇಶ ನೀಡಿ, ಸಮೀಕ್ಷೆ ನಡೆಸಲು ಕಮಿಷನರ್ ತಂಡ ರಚನೆ ಮಾಡಲು ಸೂಚಿಸಿದ್ದಾರೆ.

ಭಗವಾನ್ ಕೃಷ್ಣ ಜನಿಸಿದ ಸ್ಥಳದಲ್ಲಿ ಮಸೀದಿಯನ್ನು ನಿರ್ಮಿಸಲಾಗಿದೆ ಎನ್ನುವುದು ಹಿಂದೂ ಅರ್ಜಿದಾರರ ವಾದವಾಗಿದೆ. ಮಥುರಾದಲ್ಲಿನ ಶಾಹಿ ಈದ್ಗಾ ಮಸೀದಿಯನ್ನು ಔರಂಗಜೇಬನ ಆದೇಶದ ಮೇರೆಗೆ ಕೃಷ್ಣ ಜನ್ಮಸ್ಥಳದ ಪಕ್ಕದಲ್ಲಿ ನಿರ್ಮಿಸಲಾಗಿತ್ತು. ಸಮೀಕ್ಷೆಯ ವಿಧಾನಗಳನ್ನು ಡಿಸೆಂಬರ್ 18ರಂದು ನಡೆಯುವ ಮುಂದಿನ ವಿಚಾರಣೆಯಲ್ಲಿ ಚರ್ಚಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆ.

ಭಗವಾನ್ ಶ್ರೀಕೃಷ್ಣ ವಿರಾಜಮಾನ ಸಮಿತಿ ಹಾಗೂ ಇತರ 7 ಮಂದಿ ಮಸೀದಿಯ ಸರ್ವೇ ನಡೆಸುವಂತೆ ಅರ್ಜಿ ಸಲ್ಲಿಸಿದ್ದರು. ಹಿಂದೂ ದೇವಸ್ಥಾನವನ್ನು ಬೀಳಿಸಿ ಶಾಹಿ ಈದ್ಗಾ ಮಸೀದಿ ಕಟ್ಟಲಾಗಿದೆ. ಶಾಹಿ ಈದ್ಗಾ ಮಸೀದಿಯಲ್ಲಿ ಹಿಂದೂ ದೇವಸ್ಥಾನದ ಕುರುಹುಗಳಿವೆ. ಹೀಗಾಗಿ ಈದ್ಗಾ ಮಸೀದಿಯನ್ನು ಸಮೀಕ್ಷೆಗೆ ಒಳಪಡಿಸಬೇಕು ಎಂದು ಅರ್ಜಿ ಸಲ್ಲಿಸಲಾಗಿತ್ತು.

ಇತ್ತೀಚೆಗೆ ಸುಪ್ರೀಂ ಕೋರ್ಟ್ ಈ ಕುರಿತ ಅರ್ಜಿಯನ್ನು ವಜಾಗೊಳಿಸಿತ್ತು. ದೇವಸ್ಥಾನದ ಮೇಲೆ ಮಸೀದಿ ಕಟ್ಟಲಾಗಿದೆಯೇ ಎನ್ನುವುದನ್ನು ಪತ್ತೆ ಹಚ್ಚಲು ಸರ್ವೆಗೆ ಅವಕಾಶ ನೀಡುವಂತೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿತ್ತು. ಸದ್ಯ ಹೈಕೋರ್ಟ್‌ನಲ್ಲಿ ಕೃಷ್ಣ ಜನ್ಮಭೂಮಿ ಟ್ರಸ್ಟ್‌ಗೆ ಜಯ ಸಿಕ್ಕಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

15 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago