Featured

ಕೃಷ್ಣ ನಗರಿ ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಗೆ ಭರದ ಸಿದ್ಧತೆ – Vishwanews24

ಕೃಷ್ಣ ನಗರಿ ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಗೆ ಭರದ ಸಿದ್ಧತೆ

ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿಗೆ ದಿನಗಣನೆ ಆರಂಭವಾಗಿದ್ದು. ಉಡುಪಿ ಶ್ರೀಕೃಷ್ಣ ಮಠದಲ್ಲಿ ಈಗಾಗಲೇ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಕಾಣಿಸಿ ಕೊಳ್ಳುತ್ತಿದ್ದಾರೆ. ಪರ್ಯಾಯ ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರ ನೇತೃತ್ವದಲ್ಲಿ ನಡೆಯುವ ಉತ್ಸವಕ್ಕೆ ರಥಬೀದಿಯ ಸುತ್ತ ಗುರ್ಜಿ ಹಾಕುವ, ದೀಪಾಲಂಕಾರ ಪ್ರಕ್ರಿಯೆ ಆರಂಭಗೊಂಡಿದೆ.

ಶ್ರೀಕೃಷ್ಣ ಜನ್ಮಾಷ್ಟಮಿಗೆ ಮಠದ ವಿವಿಧೆಡೆ ಹೂವಿನ ಅಲಂಕಾರ, ಪಾಕಶಾಲೆಯಲ್ಲಿ ಉಂಡೆ-ಚಕ್ಕುಲಿ ತಯಾರಿ ಆರಂಭಗೊಂಡಿದೆ. ಸುಮಾರು 50 ಮಂದಿ ಬಾಣಸಿಗರು ಈ ಕೆಲಸದಲ್ಲಿ ತೊಡಗಿದ್ದಾರೆ. ಇದನ್ನು ಶ್ರೀಕೃಷ್ಣಾಷ್ಟಮಿಯ ದಿನ (ಸೆ.6) ಮಧ್ಯರಾತ್ರಿ ದೇವರಿಗೆ ನಿವೇದಿಸಲಾಗು ತ್ತದೆ. ಕೃಷ್ಣನ ಮೃಣ್ಮಯ ಮೂರ್ತಿ ವಿಟ್ಲಪಿಂಡಿ ಉತ್ಸವದಲ್ಲಿ (ಸೆ.7) ಕೃಷ್ಣನ ಮೃಣ್ಮಯ ಮೂರ್ತಿ ಪೂಜೆಗೊಳ್ಳುತ್ತದೆ. ಇದರ ವಿಗ್ರಹ ರಚಿಸುವ ಕಾರ್ಯವೂ ನಡೆದಿದೆ. 21 ವರ್ಷಗಳಿಂದ ಕಲಾವಿದ ಸೋಮನಾಥ ಚಿಟ್ಪಾಡಿ ಅವರು ಈ ಮೂರ್ತಿ ರಚಿಸುತ್ತಿದ್ದಾರೆ.

ಉತ್ಸವ ಮೂರ್ತಿಯನ್ನು ಇಡುವ ಅಟ್ಟೆ ಪ್ರಭಾವಳಿಗೆ ಸೂಕ್ತವಾಗಿ 9 ಇಂಚು ಎತ್ತರದ ಮಣ್ಣಿನ ಮೂರ್ತಿ ನಿರ್ಮಿಸಲಾಗುತ್ತದೆ. ಈಗ ಚಾತು ರ್ಮಾಸ ವ್ರತದ ಅವಧಿಯಾದ ಕಾರಣ ಉತ್ಸವಮೂರ್ತಿಯನ್ನು ಗರ್ಭಗುಡಿಯಿಂದ ಹೊರತರುವುದಿಲ್ಲ. ಹೀಗಾಗಿ ಮಣ್ಣಿನ ವಿಗ್ರಹ ತಯಾರಿಸಿ ಪೂಜಿಸಲಾಗುತ್ತದೆ.

ಈಗಾಗಲೇ ಶ್ರೀಕೃಷ್ಣಮಠ, ಪರ್ಯಾ ಯ ಶ್ರೀ ಕೃಷ್ಣಾಪುರ ಮಠದ ವತಿಯಿಂದ ಅಷ್ಟಮಿ ಪ್ರಯುಕ್ತ ಸೆ. 1ರಿಂದ 8ರ ವರೆಗೆ ಕೃಷ್ಣಮಠದ ರಾಜಾಂಗಣದಲ್ಲಿ “ಅಷ್ಟದಿನೋತ್ಸವ’ ಕಾರ್ಯಕ್ರಮ ನಡೆಯಲಿದೆ. ನಿತ್ಯ ಪ್ರವಚನ ಸೇರಿದಂತೆ ನೃತ್ಯ, ಗಾಯನ ಸಹಿತ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರಸ್ತುತಿಗೊಳ್ಳುತ್ತಿವೆ. ಶ್ರೀಕೃಷ್ಣ ಮಠದಲ್ಲಿ ಹಲವು ಸ್ಪರ್ಧೆಗಳು ನಡೆಯುತ್ತಿದ್ದು, ಸ್ಪರ್ಧಾಳುಗಳು ನೋಂದಾಯಿಸಿದ್ದಾರೆ.

ರಥಬೀದಿ ಪ್ರಮುಖ ಆಕರ್ಷಣೆ ಯಾಗಿದ್ದು, ವಿಟ್ಲಪಿಂಡಿಯಂದು ಗೊಲ್ಲರು ಮೊಸರು ಕುಡಿಕೆಗಳನ್ನು ಒಡೆಯಲು ಗುರ್ಜಿ ನೆಡಲಾಗುತ್ತಿದೆ.

ವಿಟ್ಲಪಿಂಡಿ ಉತ್ಸವ

ವಿಟ್ಲಪಿಂಡಿಯಂದು (ಸೆ. 7) ಬೆಳಗ್ಗೆ ಬೇಗ ಪೂಜೆಗಳನ್ನು ನಡೆಸಲಾಗುತ್ತದೆ.

ಇದಕ್ಕೆ ಕಾರಣ ಕೃಷ್ಣಜನ್ಮಾಷ್ಟಮಿಯಂದು ಏಕಾದಶಿ ವ್ರತದಂತೆ ನಿರ್ಜಲ ಉಪವಾಸ ಇರುವುದು. ಸೆ. 7ರಂದು ಬೆಳಗ್ಗೆ 10 ಗಂಟೆಯಿಂದ ಅನ್ನಸಂತ ರ್ಪಣೆ ನಡೆಯಲಿದೆ. ಇದು ಅನ್ನಬ್ರಹ್ಮ ಮತ್ತು ಭೋಜನ ಶಾಲೆಯಲ್ಲಿ ಭೋಜನ ಪ್ರಸಾದ ವಿತರಣೆ ನಡೆಯಲಿದೆ.

ವೇಷಧಾರಿಗಳು ಸಜ್ಜು

ಹುಲಿ ವೇಷ ತಂಡಗಳು ಅಷ್ಟಮಿಗೆ ಹುಲಿ ಕುಣಿತ ಪ್ರದರ್ಶಿಸಲು ಸಜ್ಜು ಗೊಂಡಿವೆ ಈ ಬಾರಿ ವಿಶೇಷವಾಗಿ ಮಹಿಳಾ ಹುಲಿವೇಷಧಾರಿಗಳ ತಂಡ ಗಮನ ಸೆಳೆಯಲಿದೆ. ವಿವಿಧ ಸಂಘ-ಸಂಸ್ಥೆಗಳು ಕೃಷ್ಣ ವೇಷ ಸ್ಪರ್ಧೆ ಮತ್ತು ಹುಲಿ ಕುಣಿತ ಸ್ಪರ್ಧೆ ಆಯೋಜನೆಯಲ್ಲಿ ತೊಡಗಿವೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

42 minutes ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

55 minutes ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 hour ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

4 hours ago