ಕೆಂಪುಕೋಟೆಯಲ್ಲಿ ಕಿಸಾನ್ ಯೂನಿಯನ್ ಧ್ವಜ ಹಾರಿಸಿದ ರೈತ -Vishwanews24
ಕೆಂಪುಕೋಟೆಯಲ್ಲಿ ಕಿಸಾನ್ ಯೂನಿಯನ್ ಧ್ವಜ ಹಾರಿಸಿದ ರೈತ -Vishwanews24
ನವದೆಹಲಿ, : ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ರದ್ದುಪಡಿಸಲು ಆಗ್ರಹಿಸಿ ಕಳೆದ ಒಂದೂವರೆ ತಿಂಗಳಿಗೂ ಅಧಿಕ ಕಾಲದಿಂದ ದೆಹಲಿಯ ಹಲವು ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಲಿರುವ ರೈತರು ಗಣರಾಜ್ಯೋತ್ಸವವಾದ ಈ ದಿನದಂದು ಟ್ರ್ಯಾಕ್ಟರ್ ರ್ಯಾಲಿ ಹಮ್ಮಿಕೊಂಡಿದ್ದಾರೆ. ಈ ಸಂದರ್ಭ ಪೊಲೀಸರು ಹಾಗೂ ರೈತರ ನಡುವೆ ಸಂಘರ್ಷ ನಡೆದು ಪರಿಸ್ಥಿತಿ ಉದ್ವಿಗ್ನ ಸ್ಥಿತಿಗೆ ತಲುಪಿದೆ.
ರೈತರ ಗುಂಪು ಕೆಂಪುಕೋಟೆಯ ಆವರಣಕ್ಕೆ ಲಗ್ಗೆ ಇಟ್ಟಿದ್ದು ರೈತನೋರ್ವ ಕೆಂಪುಕೋಟೆಯ ಮುಂಭಾಗದಲ್ಲಿರುವ ಧ್ವಜಸ್ತಂಭಕ್ಕೆ ಹತ್ತಿ ಅಲ್ಲಿ ಭಾರತೀಯ ಕಿಸಾನ್ ಯೂನಿಯನ್ ನ ಧ್ವಜವನ್ನು ಹಾರಿಸಿದ್ದಾನೆ.
Delhi: Flags installed by protestors continue to fly at Red Fort. #FarmLaws #RepublicDay pic.twitter.com/U0SZnTw4Wn
— ANI (@ANI) January 26, 2021
ಸಾರ್ವಜನಿಕರ ದೂರು ಹಿನ್ನಲೆ : ವೆನ್ಲಾಕ್ ಆಸ್ಪತ್ರೆಗೆ ಸಚಿವ, ಶಾಸಕರುಗಳ ದಿಢೀರ್ ಭೇಟಿ -Vishwanews24
ಕೆಂಪುಕೋಟೆಯ ಆವರಣಕ್ಕೆ ಪ್ರವೇಶಿಸಿರುವ ರೈತರು ಅದರ ಮುಂಭಾಗದಲ್ಲಿ ತಮ್ಮ ಟ್ರ್ಯಾಕ್ಟರ್ಗಳನ್ನು ಇರಿಸಿದ್ದಾರೆ. ರೈತರು ಮುತ್ತಿಗೆಯ ಯತ್ನವನ್ನು ಕೂಡಾ ಮಾಡಿದ್ದಾರೆ. ಪೊಲೀಸರು ರೈತರನ್ನು ನಿಯಂತ್ರಿಸಲು ಹರಸಾಹಸ ಮಾಡುತ್ತಿದ್ದು, ಪೊಲೀಸರು ರೈತರ ನಡುವೆ ಮಾತಿನ ಚಕಮಕಿಯೂ ನಡೆದಿದೆ
#WATCH A protestor hoists a flag from the ramparts of the Red Fort in Delhi#FarmLaws #RepublicDay pic.twitter.com/Mn6oeGLrxJ
— ANI (@ANI) January 26, 2021
