ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಗೆ ಇನ್ನು 10 ದಿನಗಳಷ್ಟೇ ಬಾಕಿಯಿದೆ. ಈ ಹಿನ್ನೆಲೆ ದೆಹಲಿಯಾದ್ಯಂತ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಹೀಗಿದ್ದೂ ಕೆಂಪು ಕೋಟೆ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ ಬಾಂಗ್ಲಾದೇಶದ ಐವರು ಅಕ್ರಮ ವಲಸಿಗರನ್ನ ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಕೆಂಪು ಕೋಟೆಯ ಪ್ರವೇಶ ನಿಯಂತ್ರಣ ಬಿಂದುವಿನ ಬಳಿ ಆ ಪ್ರದೇಶದಲ್ಲಿ ನಿಯೋಜಿಸಲಾದ ಪೊಲೀಸ್ ತಂಡವು ಆರೋಪಿಗಳನ್ನು ವಿಚಾರಿಸಿ ಬಂಧಿಸಿದೆ.
20 ರಿಂದ 25 ವರ್ಷ ವಯಸ್ಸಿನ ಇಬ್ಬರು ಆರೋಪಿಗಳು ನಿಯಮಿತ ತಪಾಸಣೆಯ ಸಮಯದಲ್ಲಿ ಸರಿಯಾದ ದಾಖಲೆಗಳನ್ನ ತೋರಿಸುವಲ್ಲಿ ವಿಫಲರಾಗಿದ್ದಾರೆ. ಹೆಚ್ಚಿನ ತಪಾಸಣೆ ನಡೆಸಿದಾಗ ಅವರು ಅಕ್ರಮವಾಗಿ ನೆಲೆಸಿರುವುದು ಕಂಡು ಬಂದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಉಪ ಪೊಲೀಸ್ ಆಯುಕ್ತ (ಉತ್ತರ ಜಿಲ್ಲೆ) ರಾಜ ಬಂಥಿಯಾ, ಇವರೆಲ್ಲರೂ ಅಕ್ರಮ ವಲಸಿಗರಾಗಿದ್ದು, ಅಕ್ರಮವಾಗಿ ಕೆಂಪು ಕೋಟೆ ಆವರಣಕ್ಕೆ ಪ್ರವೇಶಿಸಲು ಪ್ರಯತ್ನಿಸಿದ್ದರು. ಹೀಗಾಗಿ ಐವರು ಬಾಂಗ್ಲಾದೇಶದ ಪ್ರಜೆಗಳನ್ನ ಬಂಧಿಸಲಾಗಿದೆ. ವಿಚಾರಣೆಯ ಸಮಯದಲ್ಲಿ, ಅವರು ಸುಮಾರು 3-4 ತಿಂಗಳ ಹಿಂದೆ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿ ದೆಹಲಿಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎಂದು ಅವರು ತಿಳಿಸಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…