ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಗೆ ಇನ್ನು 10 ದಿನಗಳಷ್ಟೇ ಬಾಕಿಯಿದೆ. ಈ ಹಿನ್ನೆಲೆ ದೆಹಲಿಯಾದ್ಯಂತ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಹೀಗಿದ್ದೂ ಕೆಂಪು ಕೋಟೆ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ ಬಾಂಗ್ಲಾದೇಶದ ಐವರು ಅಕ್ರಮ ವಲಸಿಗರನ್ನ ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಕೆಂಪು ಕೋಟೆಯ ಪ್ರವೇಶ ನಿಯಂತ್ರಣ ಬಿಂದುವಿನ ಬಳಿ ಆ ಪ್ರದೇಶದಲ್ಲಿ ನಿಯೋಜಿಸಲಾದ ಪೊಲೀಸ್ ತಂಡವು ಆರೋಪಿಗಳನ್ನು ವಿಚಾರಿಸಿ ಬಂಧಿಸಿದೆ.
20 ರಿಂದ 25 ವರ್ಷ ವಯಸ್ಸಿನ ಇಬ್ಬರು ಆರೋಪಿಗಳು ನಿಯಮಿತ ತಪಾಸಣೆಯ ಸಮಯದಲ್ಲಿ ಸರಿಯಾದ ದಾಖಲೆಗಳನ್ನ ತೋರಿಸುವಲ್ಲಿ ವಿಫಲರಾಗಿದ್ದಾರೆ. ಹೆಚ್ಚಿನ ತಪಾಸಣೆ ನಡೆಸಿದಾಗ ಅವರು ಅಕ್ರಮವಾಗಿ ನೆಲೆಸಿರುವುದು ಕಂಡು ಬಂದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಉಪ ಪೊಲೀಸ್ ಆಯುಕ್ತ (ಉತ್ತರ ಜಿಲ್ಲೆ) ರಾಜ ಬಂಥಿಯಾ, ಇವರೆಲ್ಲರೂ ಅಕ್ರಮ ವಲಸಿಗರಾಗಿದ್ದು, ಅಕ್ರಮವಾಗಿ ಕೆಂಪು ಕೋಟೆ ಆವರಣಕ್ಕೆ ಪ್ರವೇಶಿಸಲು ಪ್ರಯತ್ನಿಸಿದ್ದರು. ಹೀಗಾಗಿ ಐವರು ಬಾಂಗ್ಲಾದೇಶದ ಪ್ರಜೆಗಳನ್ನ ಬಂಧಿಸಲಾಗಿದೆ. ವಿಚಾರಣೆಯ ಸಮಯದಲ್ಲಿ, ಅವರು ಸುಮಾರು 3-4 ತಿಂಗಳ ಹಿಂದೆ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿ ದೆಹಲಿಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎಂದು ಅವರು ತಿಳಿಸಿದ್ದಾರೆ.
ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…
ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…
ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…
ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…
ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…
ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…