Featured

ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಏಕೈಕ ಕನ್ನಡಿಗರಾದ ಎಚ್ ಡಿ ದೇವೇಗೌಡ ರನ್ನುಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ : ಕುಮಾರಸ್ವಾಮಿ – Vishwanews24

ಬಿಜೆಪಿ ಪಕ್ಷವು ಕೆಂಪೇಗೌಡರ ವಿಚಾರವನ್ನು ರಾಜಕೀಯ ವಸ್ತುವಾಗಿ ಬಳಸುತ್ತಿದೆ

ಬೆಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಅನಾವರಣಗೊಳಿಸಿದರು. ಇದೇ ಸಂದರ್ಭದಲ್ಲಿ ಬಿಜೆಪಿ ಪಕ್ಷವು ಕೆಂಪೇಗೌಡ ವಿಚಾರವನ್ನು ರಾಜಕೀಯ ವಸ್ತುವಾಗಿ ಬಳಸುತ್ತಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.

ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗರಾದ ಎಚ್ ಡಿ ದೇವೇಗೌಡ ಅವರನ್ನು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಸರಕಾರವು ಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ. ನಾಡಪ್ರಭುಗಳ ಪ್ರತಿಮೆ ಸ್ಥಾಪನೆಯ ಕಾಮಗಾರಿಗೆ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿಗಳನ್ನು ಆಹ್ವಾನಿಸಿದ ಬಿಜೆಪಿ ಸರಕಾರ, ಅದೇ ಪ್ರಧಾನಿಗಳಿಂದ ಪ್ರತಿಮೆ ಲೋಕಾರ್ಪಣೆ ಮಾಡಿಸುವ ಸಮಾರಂಭಕ್ಕೆ ಅವರನ್ನು ಆಹ್ವಾನ ಮಾಡಲಿಲ್ಲ, ಯಾಕೆ ಎಂದು ಪ್ರಶ್ನಿಸಿದ್ದಾರೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ..ಇನ್ನೆರಡು ದಿನ ಗುಡುಗು ಗಾಳಿ ಸಹಿತ ಭಾರೀ ಮಳೆ ಸಾಧ್ಯತೆ..ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ – Vishwanews24

ಯಾವುದೋ ಸ್ಥಳೀಯ ಮಟ್ಟದ ಕಾರ್ಯಕ್ರಮ ಆಗಿದ್ದಿದ್ದರೆ ಯಾರೂ ಪ್ರಶ್ನೆ ಮಾಡುತ್ತಿರಲಿಲ್ಲ. ಆದರೆ, ನಾಡಪ್ರಭುಗಳ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಪ್ರಧಾನಿಗಳೇ ಬರುತ್ತಾರೆ ಎಂದರೆ, ನಮ್ಮ ಹೆಮ್ಮೆಯ ಮಾಜಿ ಪ್ರಧಾನಿಗಳನ್ನು ಅಧಿಕೃತವಾಗಿ ಕರೆಯಲೇಬೇಕಿತ್ತು. ಅವರ ಬಗ್ಗೆ ಅನಾದರ ತೋರಿದ್ದು ಕನ್ನಡಿಗರಿಗೆ ಅಪಾರ ನೋವುಂಟು ಮಾಡಿದೆ. ರಾಜ್ಯ ಬಿಜೆಪಿ ಸರಕಾರ, ಬಿಜೆಪಿ ನಾಯಕರು ರಾಜಕೀಯ ಕಾರಣಕ್ಕಾಗಿ ಮಾಜಿ ಪ್ರಧಾನಿಗಳನ್ನು ಕಡೆಗಣಿಸಿದ್ದಾರೆ ಎನ್ನುವುದು ಎಲ್ಲರ ಭಾವನೆ. ಇದನ್ನು ಬಿಜೆಪಿ ಪಕ್ಷದ ಕಾರ್ಯಕ್ರಮದಂತೆ ನಡೆಸಿದ್ದು ಮಾಜಿ ಪ್ರಧಾನಿಗಳಿಗೆ ಮಾತ್ರವಲ್ಲ, ಸಮಸ್ತ ಕನ್ನಡಿಗರು ಹಾಗೂ ಸ್ವತಃ ನಾಡಪ್ರಭುಗಳಿಗೇ ಮಾಡಿದ ಅಪಮಾನ. ಇದು ಅಕ್ಷಮ್ಯದ ಪರಮಾವಧಿ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸರ್ವ ಜನರನ್ನು ಸಮಾನವಾಗಿ ಕಂಡು ಆದರ್ಶ ಪ್ರಭುವಾಗಿದ್ದ ನಾಡಪ್ರಭು ಕೆಂಪೇಗೌಡರನ್ನು ರಾಜಕೀಯಕ್ಕೆ ಎಳೆಯುವ ಕೆಲಸವನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಮಾಡಿರುವುದು ಸ್ಪಷ್ಟ. ಇದು ಅತ್ಯಂತ ದುರದೃಷ್ಟಕರ. ರಾಜ್ಯ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡೇ ಪ್ರತಿಮೆ ಅನಾವರಣ ಮಾಡಲಾಗಿದೆ ಎನ್ನುವುದು ಸತ್ಯ. ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯ ಸರಕಾರ ಹಾಗೂ ಬಿಜೆಪಿ ನಾಯಕರು ದಾರಿ ತಪ್ಪಿಸಿದ್ದಾರೆ ಎನ್ನುವುದರಲ್ಲಿ ಸಂಶಯ ಇಲ್ಲ. ದೇವೇಗೌಡರ ಬಗ್ಗೆ ಅತೀವ ಗೌರವ ಇಟ್ಟುಕೊಂಡಿರುವ ಪ್ರಧಾನಿಗಳ ಬಗ್ಗೆಯೇ ಕನ್ನಡಿಗರಲ್ಲಿ ತಪ್ಪು ಅಭಿಪ್ರಾಯ ಮೂಡುವಂತೆ ರಾಜ್ಯ ಬಿಜೆಪಿ ಸರಕಾರ ಮತ್ತು ಬಿಜೆಪಿ ನಾಯಕರು ವರ್ತಿಸಿದ್ದಾರೆ. ಕೆಂಪೇಗೌಡರು ಬಿಜೆಪಿ ಆಸ್ತಿಯಲ್ಲ, ಕೆಲ ಸಚಿವರ ಜಹಗೀರಲ್ಲ, ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುವ ವಿಷಯವೂ ಅಲ್ಲ. ನಾಡಪ್ರಭುಗಳು ಸಮಸ್ತ ಕನ್ನಡಿಗರ ಹೆಮ್ಮೆ. ನಮ್ಮೆಲ್ಲರ ಅರಾಧ್ಯದೈವ. ಇನ್ನು, ಬೆಂಗಳೂರು ನಗರ ನಮ್ಮೆಲ್ಲರದ್ದು. ಸಮಸ್ತ ಕನ್ನಡಿಗರ ಜೀವನಾಡಿ. ಈ ಸೂಕ್ಷ್ಮವನ್ನು ರಾಜ್ಯ ಬಿಜೆಪಿ ಸರಕಾರ ಮರೆತು ಕನ್ನಡಿಗರನ್ನು ಅಪಮಾನಿಸಿದೆ ಎಂದು ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ.

ಮೈಸೂರಿನಲ್ಲಿ ಟಿಪ್ಪು ಮೂರ್ತಿ ಸ್ಥಾಪಿಸಿದರೆ, ಬಾಬರಿ ಮಸೀದಿಯಂತೆಯೇ ಧ್ವಂಸ ಮಾಡುತ್ತೇವೆ: ಪ್ರಮೋದ್ ಮುತಾಲಿಕ್ – Vishwanews24

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago