Featured

ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಏಕೈಕ ಕನ್ನಡಿಗರಾದ ಎಚ್ ಡಿ ದೇವೇಗೌಡ ರನ್ನುಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ : ಕುಮಾರಸ್ವಾಮಿ – Vishwanews24

ಬಿಜೆಪಿ ಪಕ್ಷವು ಕೆಂಪೇಗೌಡರ ವಿಚಾರವನ್ನು ರಾಜಕೀಯ ವಸ್ತುವಾಗಿ ಬಳಸುತ್ತಿದೆ

ಬೆಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಅನಾವರಣಗೊಳಿಸಿದರು. ಇದೇ ಸಂದರ್ಭದಲ್ಲಿ ಬಿಜೆಪಿ ಪಕ್ಷವು ಕೆಂಪೇಗೌಡ ವಿಚಾರವನ್ನು ರಾಜಕೀಯ ವಸ್ತುವಾಗಿ ಬಳಸುತ್ತಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.

ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗರಾದ ಎಚ್ ಡಿ ದೇವೇಗೌಡ ಅವರನ್ನು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಸರಕಾರವು ಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ. ನಾಡಪ್ರಭುಗಳ ಪ್ರತಿಮೆ ಸ್ಥಾಪನೆಯ ಕಾಮಗಾರಿಗೆ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿಗಳನ್ನು ಆಹ್ವಾನಿಸಿದ ಬಿಜೆಪಿ ಸರಕಾರ, ಅದೇ ಪ್ರಧಾನಿಗಳಿಂದ ಪ್ರತಿಮೆ ಲೋಕಾರ್ಪಣೆ ಮಾಡಿಸುವ ಸಮಾರಂಭಕ್ಕೆ ಅವರನ್ನು ಆಹ್ವಾನ ಮಾಡಲಿಲ್ಲ, ಯಾಕೆ ಎಂದು ಪ್ರಶ್ನಿಸಿದ್ದಾರೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ..ಇನ್ನೆರಡು ದಿನ ಗುಡುಗು ಗಾಳಿ ಸಹಿತ ಭಾರೀ ಮಳೆ ಸಾಧ್ಯತೆ..ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ – Vishwanews24

ಯಾವುದೋ ಸ್ಥಳೀಯ ಮಟ್ಟದ ಕಾರ್ಯಕ್ರಮ ಆಗಿದ್ದಿದ್ದರೆ ಯಾರೂ ಪ್ರಶ್ನೆ ಮಾಡುತ್ತಿರಲಿಲ್ಲ. ಆದರೆ, ನಾಡಪ್ರಭುಗಳ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಪ್ರಧಾನಿಗಳೇ ಬರುತ್ತಾರೆ ಎಂದರೆ, ನಮ್ಮ ಹೆಮ್ಮೆಯ ಮಾಜಿ ಪ್ರಧಾನಿಗಳನ್ನು ಅಧಿಕೃತವಾಗಿ ಕರೆಯಲೇಬೇಕಿತ್ತು. ಅವರ ಬಗ್ಗೆ ಅನಾದರ ತೋರಿದ್ದು ಕನ್ನಡಿಗರಿಗೆ ಅಪಾರ ನೋವುಂಟು ಮಾಡಿದೆ. ರಾಜ್ಯ ಬಿಜೆಪಿ ಸರಕಾರ, ಬಿಜೆಪಿ ನಾಯಕರು ರಾಜಕೀಯ ಕಾರಣಕ್ಕಾಗಿ ಮಾಜಿ ಪ್ರಧಾನಿಗಳನ್ನು ಕಡೆಗಣಿಸಿದ್ದಾರೆ ಎನ್ನುವುದು ಎಲ್ಲರ ಭಾವನೆ. ಇದನ್ನು ಬಿಜೆಪಿ ಪಕ್ಷದ ಕಾರ್ಯಕ್ರಮದಂತೆ ನಡೆಸಿದ್ದು ಮಾಜಿ ಪ್ರಧಾನಿಗಳಿಗೆ ಮಾತ್ರವಲ್ಲ, ಸಮಸ್ತ ಕನ್ನಡಿಗರು ಹಾಗೂ ಸ್ವತಃ ನಾಡಪ್ರಭುಗಳಿಗೇ ಮಾಡಿದ ಅಪಮಾನ. ಇದು ಅಕ್ಷಮ್ಯದ ಪರಮಾವಧಿ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸರ್ವ ಜನರನ್ನು ಸಮಾನವಾಗಿ ಕಂಡು ಆದರ್ಶ ಪ್ರಭುವಾಗಿದ್ದ ನಾಡಪ್ರಭು ಕೆಂಪೇಗೌಡರನ್ನು ರಾಜಕೀಯಕ್ಕೆ ಎಳೆಯುವ ಕೆಲಸವನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಮಾಡಿರುವುದು ಸ್ಪಷ್ಟ. ಇದು ಅತ್ಯಂತ ದುರದೃಷ್ಟಕರ. ರಾಜ್ಯ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡೇ ಪ್ರತಿಮೆ ಅನಾವರಣ ಮಾಡಲಾಗಿದೆ ಎನ್ನುವುದು ಸತ್ಯ. ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯ ಸರಕಾರ ಹಾಗೂ ಬಿಜೆಪಿ ನಾಯಕರು ದಾರಿ ತಪ್ಪಿಸಿದ್ದಾರೆ ಎನ್ನುವುದರಲ್ಲಿ ಸಂಶಯ ಇಲ್ಲ. ದೇವೇಗೌಡರ ಬಗ್ಗೆ ಅತೀವ ಗೌರವ ಇಟ್ಟುಕೊಂಡಿರುವ ಪ್ರಧಾನಿಗಳ ಬಗ್ಗೆಯೇ ಕನ್ನಡಿಗರಲ್ಲಿ ತಪ್ಪು ಅಭಿಪ್ರಾಯ ಮೂಡುವಂತೆ ರಾಜ್ಯ ಬಿಜೆಪಿ ಸರಕಾರ ಮತ್ತು ಬಿಜೆಪಿ ನಾಯಕರು ವರ್ತಿಸಿದ್ದಾರೆ. ಕೆಂಪೇಗೌಡರು ಬಿಜೆಪಿ ಆಸ್ತಿಯಲ್ಲ, ಕೆಲ ಸಚಿವರ ಜಹಗೀರಲ್ಲ, ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುವ ವಿಷಯವೂ ಅಲ್ಲ. ನಾಡಪ್ರಭುಗಳು ಸಮಸ್ತ ಕನ್ನಡಿಗರ ಹೆಮ್ಮೆ. ನಮ್ಮೆಲ್ಲರ ಅರಾಧ್ಯದೈವ. ಇನ್ನು, ಬೆಂಗಳೂರು ನಗರ ನಮ್ಮೆಲ್ಲರದ್ದು. ಸಮಸ್ತ ಕನ್ನಡಿಗರ ಜೀವನಾಡಿ. ಈ ಸೂಕ್ಷ್ಮವನ್ನು ರಾಜ್ಯ ಬಿಜೆಪಿ ಸರಕಾರ ಮರೆತು ಕನ್ನಡಿಗರನ್ನು ಅಪಮಾನಿಸಿದೆ ಎಂದು ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ.

ಮೈಸೂರಿನಲ್ಲಿ ಟಿಪ್ಪು ಮೂರ್ತಿ ಸ್ಥಾಪಿಸಿದರೆ, ಬಾಬರಿ ಮಸೀದಿಯಂತೆಯೇ ಧ್ವಂಸ ಮಾಡುತ್ತೇವೆ: ಪ್ರಮೋದ್ ಮುತಾಲಿಕ್ – Vishwanews24

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago