Featured

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಹೊಸ ನಿಯಮ ಜಾರಿ – vishwanews24

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಹೊಸ ನಿಯಮ ಜಾರಿ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಯಾಣಿಕರ ಸಂಚಾರ ಸುಗಮಗೊಳಿಸಲು ಮತ್ತು ಕರ್ಬ್‌ಸೈಡ್‌ನಲ್ಲಿ ಆಗುತ್ತಿರುವ ವಾಹನ ದಟ್ಟಣೆಯನ್ನು ನಿಯಂತ್ರಿಸಲು 2025ರ ಡಿ.8 ರಂದು ಹೊಸ ಪಿಕ್-ಅಪ್ ನಿಯಮಗಳನ್ನು ಜಾರಿಗೊಳಿಸುತ್ತದೆ.

ಪ್ರತಿದಿನ ವಿಮಾನ ನಿಲ್ದಾಣದಲ್ಲಿ ಸುಮಾರು 1.3 ಲಕ್ಷ ಪ್ರಯಾಣಿಕರು ಮತ್ತು 1 ಲಕ್ಷ ಕ್ಕೂ ಹೆಚ್ಚು ವಾಹನಗಳು ಸಂಚರಿಸುತ್ತಿವೆ. ವಿಶೇಷವಾಗಿ ಟರ್ಮಿನಲ್‌ಗಳ ಮುಂದೆ ಇರುವ ಪಿಕ್-ಅಪ್ ಮತ್ತು ಡ್ರಾಪ್ ಪ್ರದೇಶಗಳಲ್ಲಿ ವಾಹನಗಳು ಹೆಚ್ಚು ಸಮಯ ನಿಂತಿರುವುದರಿಂದ ದಟ್ಟಣೆ ಹೆಚ್ಚುತ್ತಿದೆ. ಇದರಿಂದ ಪ್ರಯಾಣಿಕರು ಹಾಗೂ ಚಾಲಕರಿಗೆ ಅನಾನುಕೂಲವಾಗುತ್ತಿರುವ ಹಿನ್ನೆಲೆ, ಬಿಐಎಎಲ್ ಹೊಸ ವ್ಯವಸ್ಥೆಯನ್ನು ಪರಿಚಯಿಸಿದೆ.

ಖಾಸಗಿ ಕಾರುಗಳಿಗೆ (ಬಿಳಿ ಬೋರ್ಡ್) ಹೊಸ ನಿಯಮ
ಟಿ1 ಮತ್ತು ಟಿ2 ಟರ್ಮಿನಲ್‌ಗಳ ಆಗಮನ ವಲಯಕ್ಕೆ ಖಾಸಗಿ ಕಾರುಗಳಿಗೆ ಪ್ರವೇಶ ಉಚಿತ.

ಆದರೆ ಉಚಿತ ನಿಲುಗಡೆ ಸಮಯ 8 ನಿಮಿಷ ಮಾತ್ರ.
8-13 ನಿಮಿಷ ನಿಂತರೆ: 7150
13-18 ನಿಮಿಷ ನಿಂತರೆ: 7300
18 ನಿಮಿಷ ಮೀರಿದರೆ: ವಾಹನವನ್ನು ಪೊಲೀಸ್ ಠಾಣೆಗೆ ಟೋಯಿಂಗ್ ಮಾಡಲಾಗುತ್ತದೆ

ಈ ನಿಯಮಗಳು ಕರ್ಬ್‌ಸೈಡ್‌ನ್ನು ಅನಗತ್ಯವಾಗಿ ಬಳಸುವುದನ್ನು ತಡೆಯಲು ಜಾರಿಗೊಳಿಸಲಾಗಿದೆ.

ಕ್ಯಾಬ್‌ಗಳು ಮತ್ತು ಇತರೆ ವಾಣಿಜ್ಯ ವಾಹನಗಳಿಗೆ ನಿಯಮ
ಹಳದಿ ಬೋರ್ಡ್ ಟ್ಯಾಕ್ಸಿ, ಓಲಾ-ಉಬರ್, ಎಲೆಕ್ಟಿಕ್ ಕ್ಯಾಬ್‌ಗಳು ಸೇರಿದಂತೆ ಎಲ್ಲಾ ವಾಣಿಜ್ಯ ವಾಹನಗಳು ನಿಗದಿಪಡಿಸಿದ ಪಾರ್ಕಿಂಗ್ ವಲಯಗಳಲ್ಲಿ ಮಾತ್ರ ಕಾಯಬೇಕು.

ಪಾರ್ಕಿಂಗ್‌ನ ಮೊದಲ 10 ನಿಮಿಷ ಉಚಿತ
ಟಿ1 ವಾಹನಗಳು P3 | P4
ಟಿ2 ವಾಹನಗಳು P2 ಪಾರ್ಕಿಂಗ್‌ಗೆ ತೆರಳಬೇಕು

ಕರ್ಬ್‌ಸೈಡ್‌ನಲ್ಲಿ ಅನಧಿಕೃತವಾಗಿ ನಿಲ್ಲುವುದು, ಪಿಕಪ್ ಮಾಡುವುದು ಅಥವಾ ಪಥ ತಡೆದು ನಿಲ್ಲುವುದಕ್ಕೆ ದಂಡ ವಿಧಿಸಲಾಗುತ್ತದೆ.

ಯಾಕೆ ಹೊಸ ನಿಯಮ?

ಇತ್ತೀಚೆಗೆ ಅನಧಿಕೃತ ಕ್ಯಾಬ್‌ಗಳು ಮತ್ತು ಕೆಲವು ವಾಹನಗಳು ದೀರ್ಘಕಾಲ ರಸ್ತೆಬದಿಯಲ್ಲಿ ನಿಲ್ಲುವುದರಿಂದ ದಟ್ಟಣೆ ಹೆಚ್ಚುತ್ತಿದೆ. ಇದರಿಂದ ಪ್ರಯಾಣಿಕರಿಗೆ ವಿಳಂಬ, ಗೊಂದಲ ಮತ್ತು ಸುರಕ್ಷತಾ ಸಮಸ್ಯೆಗಳು ಎದುರಾಗುತ್ತಿವೆ. ಇದನ್ನು ತಪ್ಪಿಸಲು ನಿಯಮಗಳು ಕಡ್ಡಾಯಗೊಳಿಸಲಾಗಿದೆ.

ಬಿಐಎಎಲ್ ಪ್ರತಿಕ್ರಿಯೆ
ಬಿಐಎಎಲ್ ಎಂ.ಡಿ. ಮತ್ತು ಸಿಇಒ ಹರಿ ಮರಾರ್ ಹೇಳುವಂತೆ,
“ಪ್ರಯಾಣಿಕರ ಸಂಖ್ಯೆ ಏರುತ್ತಿರುವುದರಿಂದ ಪಿಕ್-ಅಪ್ ವಲಯಗಳಲ್ಲಿ ಶಿಸ್ತು ಅತ್ಯಂತ ಮುಖ್ಯ. ಹೊಸ ನಿಯಮಗಳು ಸಂಚಾರವನ್ನು ಹೆಚ್ಚು ಸುರಕ್ಷಿತ ಮತ್ತು ವೇಗವಾಗಿ ಮಾಡುತ್ತವೆ,” ಎಂದು ತಿಳಿಸಿದ್ದಾರೆ.

ವಿಮಾನ ನಿಲ್ದಾಣವು ಸಾಮಾಜಿಕ ಜಾಲತಾಣಗಳಲ್ಲಿ #BeCabWise ಅಭಿಯಾನ ನಡೆಸುತ್ತಿದೆ. ಇದರ ಉದ್ದೇಶ:
ಸರಿಯಾದ ಪಿಕ್-ಅಪ್ ಪಾಯಿಂಟ್ ಬಳಕೆ
ದಟ್ಟಣೆ ರಹಿತ ವಾತಾವರಣ
ಸುರಕ್ಷಿತ ಮತ್ತು ವೇಗವಾದ ಸಂಚಾರ
ಬಿಐಎಎಲ್ ಮೂಲಸೌಕರ್ಯ ಮತ್ತು ತಂತ್ರಜ್ಞಾನ ಹೂಡಿಕೆಗಳ ಮೂಲಕ ಪ್ರಯಾಣಿಕರಿಗೆ ವಿಶ್ವದರ್ಜೆಯ ಅನುಭವ ನೀಡಲು ಬದ್ಧವಾಗಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago