ಮಂಡ್ಯ: ಕೃಷ್ಣರಾಜಸಾಗರ ಜಲಾಶಯ(ಕೆಆರ್ಎಸ್) ಭರ್ತಿಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ಬಾಗಿನ ಅರ್ಪಿಸಿದ್ದಾರೆ. ಈ ಮೂಲಕ ಕೆಆರ್ಎಸ್ಗೆ ಬಿಎಸ್ವೈ ನಾಲ್ಕನೇ ಬಾರಿ ಬಾಗಿನ ಅರ್ಪಿಸಿದರು.
ಬಾಗಿನ ಸಲ್ಲಿಸಿದ ನಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಕಾವೇರಿ ಮಾತೆಗೆ ಬಾಗಿನ ಅರ್ಪಿಸಿದ್ದೇನೆ. 1 ತಿಂಗಳ ಹಿಂದೆ ಈ ರಾಜ್ಯದ ಯಾವುದೇ ಜಲಾಶಯ ತುಂಬಿಲ್ಲ. ಮುಂದೆ ಈ ನಾಡಿನ ಭವಿಷ್ಯ ಏನು ಎಂದು ಚಿಂತೆ ಮಾಡುತ್ತಿದ್ದೆವು. ಪ್ರತಿ ದಿನ ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಗೆ ಕರೆಮಾಡಿ ಜಲಾಶಯದ ಒಳಹರಿವಿನ ಪ್ರಮಾಣದ ಬಗ್ಗೆ ಮಾಹಿತಿ ಪಡೆಯುತ್ತಿದ್ದೆ. ಆದರೆ ವರುಣದೇವನ ಕೃಪೆಯಿಂದ ಕೇವಲ 4-5ದಿನಗಳಲ್ಲಿ ಕೆಆರ್ಎಸ್ ಭರ್ತಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಈ ಭಾಗದ ಎಲ್ಲ ಕೆರೆಗಳಿಗೆ ನೀರು ತುಂಬಿಸುವ ಕೆಲಸ ಭರದಿಂದ ಸಾಗಿದೆ. ಕೆರೆಗಳಲ್ಲಿ ನೀರು ಸಂಗ್ರಹದಿಂದ ಅಂತರ್ಜಲ ಕುಸಿಯುವುದು ತಪ್ಪಲಿದೆ. ಕೆಆರ್ಎಸ್ ಅಭಿವೃದ್ಧಿಗೆ ನಾನು ಶ್ರಮಿಸಲಿದ್ದೇನೆ. ದೇಶವಿದೇಶಗಳಿಂದ ಬರುವ ಪ್ರವಾಸಿಗರಿಗೆ ಆಕರ್ಷಣೀಯ ಸ್ಥಳವಾಗಿ ಕೆಆರ್ಎಸ್ ಅಣೆಕಟ್ಟೆಯನ್ನು ರೂಪಿಸಲು ಚಿಂತನೆ ನಡೆದಿದೆ. ಈ ಬಗ್ಗೆ ಮಂಡ್ಯ ಜಿಲ್ಲಾಧಿಕಾರಿಗಳಿಗೆ ಎಸ್ಟಿಮೇಟ್ ಕಳುಹಿಸುವಂತೆ ಸೂಚಿಸಿದ್ದೇನೆ ಎಂದು ಮಾಹಿತಿ ನೀಡಿದರು.
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…