Featured

ಕೆಆರ್‌ಎಸ್‌ ಜಲಾಶಯಕ್ಕೆ ಬಾಗಿನ ಸಲ್ಲಿಸಿದ ಮುಖ್ಯಮಂತ್ರಿ -Vishwanews24

ಮಂಡ್ಯ: ಕೃಷ್ಣರಾಜಸಾಗರ ಜಲಾಶಯ(ಕೆಆರ್‌ಎಸ್‌) ಭರ್ತಿಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ಬಾಗಿನ ಅರ್ಪಿಸಿದ್ದಾರೆ. ಈ ಮೂಲಕ ಕೆಆರ್‌ಎಸ್‌ಗೆ ಬಿಎಸ್‍ವೈ ನಾಲ್ಕನೇ ಬಾರಿ ಬಾಗಿನ ಅರ್ಪಿಸಿದರು.

ಬಾಗಿನ ಸಲ್ಲಿಸಿದ ನಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಕಾವೇರಿ ಮಾತೆಗೆ ಬಾಗಿನ ಅರ್ಪಿಸಿದ್ದೇನೆ. 1 ತಿಂಗಳ ಹಿಂದೆ ಈ ರಾಜ್ಯದ ಯಾವುದೇ ಜಲಾಶಯ ತುಂಬಿಲ್ಲ. ಮುಂದೆ ಈ ನಾಡಿನ ಭವಿಷ್ಯ ಏನು ಎಂದು ಚಿಂತೆ ಮಾಡುತ್ತಿದ್ದೆವು. ಪ್ರತಿ ದಿನ ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಗೆ ಕರೆಮಾಡಿ ಜಲಾಶಯದ ಒಳಹರಿವಿನ ಪ್ರಮಾಣದ ಬಗ್ಗೆ ಮಾಹಿತಿ ಪಡೆಯುತ್ತಿದ್ದೆ. ಆದರೆ ವರುಣದೇವನ ಕೃಪೆಯಿಂದ ಕೇವಲ 4-5ದಿನಗಳಲ್ಲಿ ಕೆಆರ್‍ಎಸ್ ಭರ್ತಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಈ ಭಾಗದ ಎಲ್ಲ ಕೆರೆಗಳಿಗೆ ನೀರು ತುಂಬಿಸುವ ಕೆಲಸ ಭರದಿಂದ ಸಾಗಿದೆ. ಕೆರೆಗಳಲ್ಲಿ ನೀರು ಸಂಗ್ರಹದಿಂದ ಅಂತರ್ಜಲ ಕುಸಿಯುವುದು ತಪ್ಪಲಿದೆ. ಕೆಆರ್‌ಎಸ್‌ ಅಭಿವೃದ್ಧಿಗೆ ನಾನು ಶ್ರಮಿಸಲಿದ್ದೇನೆ. ದೇಶವಿದೇಶಗಳಿಂದ ಬರುವ ಪ್ರವಾಸಿಗರಿಗೆ ಆಕರ್ಷಣೀಯ ಸ್ಥಳವಾಗಿ ಕೆಆರ್‌ಎಸ್‌ ಅಣೆಕಟ್ಟೆಯನ್ನು ರೂಪಿಸಲು ಚಿಂತನೆ ನಡೆದಿದೆ. ಈ ಬಗ್ಗೆ ಮಂಡ್ಯ ಜಿಲ್ಲಾಧಿಕಾರಿಗಳಿಗೆ ಎಸ್ಟಿಮೇಟ್ ಕಳುಹಿಸುವಂತೆ ಸೂಚಿಸಿದ್ದೇನೆ ಎಂದು ಮಾಹಿತಿ ನೀಡಿದರು.

 

 

 

 

 

 

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

52 minutes ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

1 hour ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

1 hour ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

1 hour ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

2 hours ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

2 hours ago